Webdunia - Bharat's app for daily news and videos

Install App

ಇಂದಿನಿಂದ ಪದವಿ ಕಾಲೇಜು ಆರಂಭ; ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದ ಡಿಸಿಎಂ

Webdunia
ಭಾನುವಾರ, 25 ಜುಲೈ 2021 (21:02 IST)
ಬೆಂಗಳೂರು: ಕೋವಿಡ್-19 ಎರಡನೇ ಅಲೆಯ ಲಾಕ್ ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನಾಳೆಯಿಂದ (ಜು.26) ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೂಚಿಸಿದ್ದಾರೆ. 
 
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ನೇರ ತರಗತಿಗಳಿಗೆ ಹಾಜರಾಗಲಿಚ್ಛಿಸುವ ಪ್ರತಿ ವಿದ್ಯಾರ್ಥಿಯೂ ಮೊದಲ ಡೋಸ್ ಲಸಿಕೆ ಪಡೆಯುವುದು ಕಡ್ಡಾಯ. ಈಗಾಗಲೇ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (UGC) ಸ್ಪಷ್ಟ ಮಾರ್ಗಸೂಚಿ ಜಾರಿ ಮಾಡಿದ್ದು, ಅದನ್ನು ಎಲ್ಲ ವಿಶ್ವವಿದ್ಯಾಲಯಗಳ ಅಡಿಯಲ್ಲಿರುವ ಕಾಲೇಜುಗಳು ಚಾಚೂತಪ್ಪದೇ ಪಾಲಿಸಬೇಕು. ಈ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. 
 
ಕೋವಿಡ್ ಮಾರ್ಗಸೂಚಿಯ ಪ್ರಾಥಮಿಕ ಶಿಷ್ಠಾಚಾರದಂತೆ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಮಾಡಲೇಬೇಕು. ನಿತ್ಯವೂ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಬೇಕು. ಅಲ್ಲದೆ, ವಿದ್ಯಾರ್ಥಿಗಳ ಲಸೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದು ಆದಷ್ಟು ಬೇಗ ಎಲ್ಲರಿಗೂ ಲಸಿಕೆ ಸಿಗುವಂತೆ ಕ್ರಮ ವಹಿಸಬೇಕು ಎಂದು ಎಲ್ಲ ಕುಲಪತಿಗಳಿಗೆ ಸೂಚನೆ ಕೊಡಲಾಗಿದೆ ಎಂದು ಡಿಸಿಎಂ ಹೇಳಿದ್ದಾರೆ. 
 
ನೇರ ತರಗತಿಗಳಿಗೆ ಹಾಜರಾಗುವ ಆಯ್ಕೆ ವಿದ್ಯಾರ್ಥಿಗಳಿಗೇ ಬಿಡಲಾಗಿದೆ. ಅವರು ಇಚ್ಛೆ ಇದ್ದರೆ ಭೌತಿಕ ತರಗತಿಗಳಿಗೆ ಹಾಜರಾಗಬಹುದು, ಇಲ್ಲವೇ ಆನ್‌ಲೈನ್ ಮೂಲಕವೂ ಕಲಿಯಬಹುದು. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಅವರು ತಿಳಿಸಿದ್ದಾರೆ. 
 
74% ವಿದ್ಯಾರ್ಥಿಗಳಿಗೆ ಲಸಿಕೆ: 
 
ರಾಜ್ಯದ ಎಲ್ಲ ವಿವಿಗಳ ವ್ಯಾಪ್ತಿಗಳಲ್ಲೂ ಲಸಿಕೀಕರಣ ವೇಗವಾಗಿ ನಡೆಯುತ್ತಿದ್ದು, ಈವರೆಗೆ 74% ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಉಳಿದ ಎಲ್ಲ ವಿದ್ಯಾರ್ಥಿಗಳಿಗೂ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ಕೊಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ. 
 
ಕೆಲ ವಿಶ್ವವಿದ್ಯಾಲಯಗಳಲ್ಲಿ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೀಕರಣ ನಡೆದಿದೆ. ಇನ್ನು ಕೆಲ ವಿವಿಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಈ ಬಗ್ಗೆ ಕ್ರಮ ವಹಿಸಲು ಆಯಾ ವಿವಿಗಳ ಕುಲಪತಿಗಳಿಗೆ ತಿಳಿಸಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶರಬತ್‌ ಜಿಹಾದ್‌ ಹೇಳಿಕೆಗೆ ಸ್ವೀಕಾರರ್ಹವಲ್ಲ: ಬಾಬಾ ರಾಮ್‌ದೇವ್‌ ವಿರುದ್ಧ ಡೆಲ್ಲಿ ಹೈಕೋರ್ಟ್‌ ಗರಂ

Wing commander assault: ಭಾಷೆ ವಿಚಾರಕ್ಕೆ ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಸಣ್ಣ ಬುದ್ಧಿ ಕನ್ನಡಿಗರದ್ದಲ್ಲ: ಸಿದ್ದರಾಮಯ್ಯ ಗುಡುಗು

ವಿದೇಶಗಳಲ್ಲಿ ರಾಷ್ಟ್ರ ಗೌರವಕ್ಕೆ ಧಕ್ಕೆ ತಂದ ರಾಹುಲ್ ಗಾಂಧಿ: ಬಿವೈ ವಿಜಯೇಂದ್ರ

ದುಬೈನಿಂದ ಬಂದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ತುಂಬಿದ ಪತ್ನಿ

Hizab vs Janeu: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡಾ ಮುಖ್ಯ: ಅಲಿಯಾ ಅಸ್ಸಾದಿ ಟ್ವೀಟ್ ಕಿಡಿ

ಮುಂದಿನ ಸುದ್ದಿ
Show comments