Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದೆ -ಡಾ. ಕೆ. ಸುಧಾಕರ್

Webdunia
ಮಂಗಳವಾರ, 4 ಜನವರಿ 2022 (14:06 IST)
ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆಯಾಗಿರುವುದು ಮೂರನೇ ಅಲೆಯ ಸುಳಿವಲ್ಲವೇ? ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.
ಶೇ.0.4ರಷ್ಟಿದ್ದ ಪಾಸಿಟಿವಿಟಿ ದರ ಶೇ.1.6ಕ್ಕೆ ಏರಿಕೆಯಾಗಿದೆ. ಇದು ಮೂರನೇ ಅಲೆ ಅಲ್ಲವೇ? ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು.
 
ರಾಜ್ಯದಲ್ಲಿ ನಿನ್ನೆ 1290 ಪಾಸಿಟಿವ್ ಪ್ರಕರಣಗಳು ಬಂದಿದ್ದು ಇದರಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಸೇರಿವೆ. ನೆರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಒಳಗೊಂಡಂತೆ ಸಾಮಾನ್ಯ ಜನರ ಮೇಲೆ ಒತ್ತಡ ಹೇರದಂತೆ ಈ ಸವಾಲನ್ನು ಎದುರಿಸಬೇಕಾಗಿದೆ.
 
ಲಾಕ್‍ಡೌನ್ ಜಾರಿಯಂತ ಕಠಿಣ ಪದ ಬಳಸುವುದು ಬೇಡ. ಈಗಷ್ಟೆ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು, ಲಾಕ್‍ಡೌನ್ ಮರುಜಾರಿಯಾದರೆ ಅನೇಕ ನಷ್ಟಕ್ಕೆ ಗುರಿಯಾಗ ಬೇಕಾಗುತ್ತದೆ. ಸೋಂಕು ಹರಡುವಿಕೆ ತಡೆಯಲು ಬೆಂಗಳೂರಿನಲ್ಲಿ ವಿಶೇಷ ಕ್ರಮ ಕೈಗೊಳ್ಳುವುದು ಅತ್ಯಂತ ಅವಶ್ಯಕ. ಮೊದಲೆರಡು ಅಲೆಗಳಂತೆ 3ನೇ ಅಲೆಗೂ ಕೂಡ ಬೆಂಗಳೂರೇ ಕೇಂದ್ರ ಸ್ಥಾನ. ನಿರೀಕ್ಷೆಗೂ ಮೀರಿದ ವೇಗದಲ್ಲಿ ಸೋಂಕು ಹರಡುತ್ತಿದೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments