2030ರಲ್ಲಿ ಹೊಸ ಶಿಕ್ಷಣ ನೀತಿ ಜಾರಿ: ಡಿಸಿಎಂ ಅಶ್ವರ್ತ ನಾರಾಯಣ

Webdunia
ಸೋಮವಾರ, 12 ಜುಲೈ 2021 (16:34 IST)
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 
ಶಿಕ್ಷಣ ತಜ್ಞರೊಂದಿಗೆ ನಡೆಸಿದ ಚರ್ಚೆಯ ವೇಳೆ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಮಾಡುವ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸ್ವ ಇಚ್ಛೆಯಿಂದ ಯಾರೇ ಮುಂದೆ ಬಂದು ಜಾರಿ ಮಾಡಿದರೂ ಸರಕಾರ ಅವಕಾಶ ನೀಡಲಿದೆ ಎಂದರು.
 
ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಜಾರಿ ಮಾಡಲು 15 ವರ್ಷ ಕಾಲಾವಕಾಶ ಕೇಂದ್ರ ಸರಕಾರ ನೀಡಿದೆ. ಆದರೆ, 10  ವರ್ಷಗಳ ಅವಧಿಯಲ್ಲೇ ಜಾರಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಎಲ್ಲ ಕೆಲಸಗಳನ್ನು ಕೈಗೆತ್ತಿಕೊಂಡಿದೆ. 2040ರ ಹೊತ್ತಿಗೆ ರಾಜ್ಯವೂ ಸೇರಿ ಇಡೀ ದೇಶದ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಿಬಿಟ್ಟಿರುತ್ತದೆ ಎಂದು ಅವರು ತಿಳಿಸಿದರು. 
 
ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಎಲ್ಲ ವಿಷಯಾವಾರು ಸಮಿತಿಗಳನ್ನು ರಚನೆಗಳನ್ನು ಆ ಬಗ್ಗೆ ಕಾರ್ಯಚೌಕಟ್ಟು ನಿಗದಿಪಡಿಸಿ ವರದಿ ನೀಡುವಂತೆ ಕೋರಲಾಗಿದೆ. ಆ ವರದಿಗಳೆಲ್ಲ ಕೈ ಸೇರಿದ ಕೂಡಲೇ ಜಾರಿಯ ಪ್ರಕ್ರಿಯೆಗಳನ್ನು ಶುರು ಮಾಡಲಾಗುವುದು ಎಂದು ಅವರು ಹೇಳಿದರು.
 
ಶಿಕ್ಷಣ ನೀತಿ ಜಾರಿ ಮಾಡುವ ಪ್ರಕ್ರಿಯೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಡಿಜಿಟಲ್‌ ಕಲಿಕೆ ಮತ್ತು ಬೋಧನೆ ಅತ್ಯುತ್ತಮವಾಗಿ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಡಿಸಿಎಂ ಹೇಳಿದರು.
 
ವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಡಾ.ಬಿ.ಟಿ.ತಿಮ್ಮೇಗೌಡ, ವಿಧಾನ ಪರಿಷತ್‌ ಸದಸ್ಯ ಎಸ್ ವಿ ಸಂಕನೂರ್‌, ಕಾನೂನು ವಿವಿ ಕುಲಪತಿ ಪ್ರೊ.ಈಶ್ವರ ಭಟ್‌, ಧಾರವಾಡ ಕೃಷಿ ವಿಜ್ಞಾನ ವಿವಿ ಕುಲಪತಿ ಡಾ.ಚೆಟ್ಟಿ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments