ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

Krishnaveni K
ಗುರುವಾರ, 23 ಅಕ್ಟೋಬರ್ 2025 (11:01 IST)
ದೀಪಾವಳಿ ಹಬ್ಬ ಮುಗಿದೇ ಹೋಯ್ತು. ಆದರೆ ಹಬ್ಬದ ಸಂದರ್ಭದಲ್ಲಿ ಪಟಾಕಿಯಿಂದಾಗಿ ವಾಯು ಮಾಲಿನ್ಯವಾಗಿ ಆರೋಗ್ಯದ ಮೇಲೆ ಪರಿಣಾಮವಾಗಿದ್ದರೆ ಏನು ಮಾಡಬೇಕು ನೋಡಿ.
 

ದೀಪಾವಳಿ ಸಂದರ್ಭದಲ್ಲಿ ಎಲ್ಲರಿಗೂ ಪಟಾಕಿ ಹೊಡೆಯುವ ಸಂಭ್ರಮ. ಆದರೆ ಇದರಿಂದಾಗಿ ವಾತಾವರಣದಲ್ಲಿ ಹೊಗೆ ತುಂಬಿಕೊಂಡು ಅನೇಕ ಆರೋಗ್ಯ ಸಮಸ್ಯೆಯಾಗುತ್ತದೆ. ಹೀಗಿದ್ದಾಗ ಅದನ್ನು ತಕ್ಷಣವೇ ಪರಿಹರಿಸಿಕೊಳ್ಳಬೇಕು.

ಯಾವೆಲ್ಲಾ ಆರೋಗ್ಯ ಸಮಸ್ಯೆಯಾಗುತ್ತದೆ
ಈಗಾಗಲೇ ಉಸಿರಾಟ, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಅನುಭವಿಸುತ್ತಿರುವವರಿಗೆ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಅಸ್ತಮಾ, ಬ್ರಾಂಕೈಟಿಸ್ ಸೇರಿದಂತೆ ಉಸಿರಾಟದ ಸಮಸ್ಯೆ ಉಲ್ಬಣವಾಗಬಹುದು. ಇಂತಹವರು ಆದಷ್ಟು ಮನೆಯಿಂದ ಹೊರಗೆ ಬಾರದೇ ಇರುವುದೇ ಉತ್ತಮ. ಅನಿವಾರ್ಯವಾದರೆ ಮಾಸ್ಕ್ ಹಾಕಿಕೊಂಡೇ ಓಡಾಡಿ.

ತಲೆನೋವು, ಗಂಟಲು ಕಿರಿ ಕಿರಿ, ಎದೆ ಉರಿ, ಕಫ, ಕೆಮ್ಮಿನ ಸಮಸ್ಯೆ ಕಂಡುಬರಬಹುದು. ಇದಕ್ಕಾಗಿ ಆದಷ್ಟು ನೀರು ಅಥವಾ ನೀರಿನಂಶ ಸೇವನೆ ಮಾಡುತ್ತಾ ದೇಹ ಹೈಡ್ರೇಟ್ ಆಗಿರುವಂತೆ ನೋಡಿಕೊಳ್ಳಿ.

ಕಣ್ಣು: ವಿಶೇಷವಾಗಿ ಪಟಾಕಿಯಿಂದ ಕಣ್ಣಿಗೆ ಹಾನಿಯಾಗುವ ಸಂಭವ ಹೆಚ್ಚು. ಕಣ್ಣಿಗೆ ಗಾಯವಾಗುವುದು ಒಂದು ಕಡೆಯಾದರೆ ಹೊಗೆಯಿಂದಾಗಿ ಕಣ್ಣು ಉರಿ, ಅಲರ್ಜಿ, ಕೆಂಪಗಾಗುವುದು ಇತ್ಯಾದಿ ಸಮಸ್ಯೆ ಕಂಡುಬರಬಹುದು. ಹೀಗಿದ್ದಾಗ ಆಗಾಗ ಕಣ್ಣುಗಳನ್ನು ಶುದ್ಧ ನೀರಿನಿಂದ ತೊಳೆಯುತ್ತಿರಿ.

ನೆನಪಿರಲಿ, ಯಾವುದೇ ಸಮಸ್ಯೆಗಳು ನಿಮ್ಮ ಮಿತಿ ಮೀರಿದೆ ಎನಿಸಿದರೆ ತಕ್ಷಣವೇ ತಜ್ಞ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಿ. ತಡ ಮಾಡಿದಷ್ಟೂ ಸಮಸ್ಯೆ ಗಂಭೀರವಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ಮುಂದಿನ ಸುದ್ದಿ
Show comments