Webdunia - Bharat's app for daily news and videos

Install App

ವೈದ್ಯರ ಕಿತ್ತಾಟಕ್ಕೆ ತಾಯಿ ಗರ್ಭದಲ್ಲಿಯೇ ಕಂದಮ್ಮ ಸಾವು

Webdunia
ಬುಧವಾರ, 30 ಆಗಸ್ಟ್ 2017 (12:48 IST)
ಜೈಪುರ: ವೈದ್ಯರ ಕಿತ್ತಾಟದಿಂದ ಆಗ ತಾನೆ ಕಣ್ಣು ಬಿಡಬೇಕಿದ್ದ ಎಳೆ ಕಂದಮ್ಮ ತಾಯಿಯ ಗರ್ಭದಲ್ಲಿಯೇ ಪ್ರಾಣ ಕಳೆದುಕೊಂಡಿರುವ ಮನಕಲಕುವ ಘಟನೆ ಜೋಧ್ಪುರದ ಉಮೈದ್ ಆಸ್ಪತ್ರೆಯಲ್ಲಿ ನಡೆದಿದೆ. ಆಪರೇಷನ್ ಥಿಯೇಟರ್ ನಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.


ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂದ ಜೋಧ್ಪುರದ ಉಮೈದ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗರ್ಭಿಣಿಯನ್ನು ಆಸ್ಪತ್ರೆ ಸಿಬ್ಬಂದಿ ಆಪರೇಶನ್ ಥಿಯೇಟರ್ ಗೆ ಕರೆ ತಂದಿದ್ದಾರೆಇದಾದ ಬಳಿಕ ಆಪರೇಷನ್ ಥಿಯೇಟರ್ ಗೆ ಬಂದ ಇಬ್ಬರು ವೈದ್ಯರು, ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮಾಡುವುದನ್ನು ಬಿಟ್ಟು ಅನಸ್ತೇಷಿಯಾ ಕೊಡುವ ವಿಚಾರವಾಗಿ ಪರಸ್ಪರ ಜಗಳವಾಡಿದ್ದಾರೆ.

30 ನಿಮಿಷಗಳ ಕಾಲ ವೈದ್ಯರು ಸಿಬ್ಬಂದಿ ಮಾತಿಗೂ ಬೆಲೆ ನೀಡದೇ ಪರಸ್ಪರ ವಾಗ್ವಾದ ನಡೆಸಿದ್ದಾರೆ. ಇದರಿಂದಾಗಿ ತಾಯಿ ಗರ್ಭದಿಂದ ಹೊರಬರಬೇಕಿದ್ದ ಕಂದಮ್ಮ ಕೊನೆಯುಸಿರೆಳೆದಿದೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿಮಾಡಿದೆ.

ಉಮೈದ್ ಆಸ್ಪತ್ರೆಯ ಡಾ. ಅಶೋಕ್ ನಾನಿವಾಲ್ ಹಾಗೂ ಡಾ. ಎಂ.ಎಲ್. ಟಕ್ ಅವರನ್ನು ಸದ್ಯ ಕರ್ತವ್ಯದಿಂದ ವಜಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.
 
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕಲಿ ಚರಣ್ ಸರಫ್, ಘಟನೆಗೆ ಸಂಬಂಧಿಸಿದಂತೆ ಸತ್ಯಾಂಶ ತಿಳಿಯಲು ತನಿಖಾ ಸಮಿತಿ ರಚಿಸಲಾಗಿದೆ. ಸಾವಿಗೆ ಕಾರಣ ತಿಳಿದುಬಂದ ಬಳಿಕ ಆರೋಪಿಗಳ ವಿರುದ್ಧ ಕ್ರಮತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments