Webdunia - Bharat's app for daily news and videos

Install App

ವೈದ್ಯರ ಕಿತ್ತಾಟಕ್ಕೆ ತಾಯಿ ಗರ್ಭದಲ್ಲಿಯೇ ಕಂದಮ್ಮ ಸಾವು

Webdunia
ಬುಧವಾರ, 30 ಆಗಸ್ಟ್ 2017 (12:48 IST)
ಜೈಪುರ: ವೈದ್ಯರ ಕಿತ್ತಾಟದಿಂದ ಆಗ ತಾನೆ ಕಣ್ಣು ಬಿಡಬೇಕಿದ್ದ ಎಳೆ ಕಂದಮ್ಮ ತಾಯಿಯ ಗರ್ಭದಲ್ಲಿಯೇ ಪ್ರಾಣ ಕಳೆದುಕೊಂಡಿರುವ ಮನಕಲಕುವ ಘಟನೆ ಜೋಧ್ಪುರದ ಉಮೈದ್ ಆಸ್ಪತ್ರೆಯಲ್ಲಿ ನಡೆದಿದೆ. ಆಪರೇಷನ್ ಥಿಯೇಟರ್ ನಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.


ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂದ ಜೋಧ್ಪುರದ ಉಮೈದ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗರ್ಭಿಣಿಯನ್ನು ಆಸ್ಪತ್ರೆ ಸಿಬ್ಬಂದಿ ಆಪರೇಶನ್ ಥಿಯೇಟರ್ ಗೆ ಕರೆ ತಂದಿದ್ದಾರೆಇದಾದ ಬಳಿಕ ಆಪರೇಷನ್ ಥಿಯೇಟರ್ ಗೆ ಬಂದ ಇಬ್ಬರು ವೈದ್ಯರು, ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮಾಡುವುದನ್ನು ಬಿಟ್ಟು ಅನಸ್ತೇಷಿಯಾ ಕೊಡುವ ವಿಚಾರವಾಗಿ ಪರಸ್ಪರ ಜಗಳವಾಡಿದ್ದಾರೆ.

30 ನಿಮಿಷಗಳ ಕಾಲ ವೈದ್ಯರು ಸಿಬ್ಬಂದಿ ಮಾತಿಗೂ ಬೆಲೆ ನೀಡದೇ ಪರಸ್ಪರ ವಾಗ್ವಾದ ನಡೆಸಿದ್ದಾರೆ. ಇದರಿಂದಾಗಿ ತಾಯಿ ಗರ್ಭದಿಂದ ಹೊರಬರಬೇಕಿದ್ದ ಕಂದಮ್ಮ ಕೊನೆಯುಸಿರೆಳೆದಿದೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿಮಾಡಿದೆ.

ಉಮೈದ್ ಆಸ್ಪತ್ರೆಯ ಡಾ. ಅಶೋಕ್ ನಾನಿವಾಲ್ ಹಾಗೂ ಡಾ. ಎಂ.ಎಲ್. ಟಕ್ ಅವರನ್ನು ಸದ್ಯ ಕರ್ತವ್ಯದಿಂದ ವಜಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.
 
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕಲಿ ಚರಣ್ ಸರಫ್, ಘಟನೆಗೆ ಸಂಬಂಧಿಸಿದಂತೆ ಸತ್ಯಾಂಶ ತಿಳಿಯಲು ತನಿಖಾ ಸಮಿತಿ ರಚಿಸಲಾಗಿದೆ. ಸಾವಿಗೆ ಕಾರಣ ತಿಳಿದುಬಂದ ಬಳಿಕ ಆರೋಪಿಗಳ ವಿರುದ್ಧ ಕ್ರಮತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಮುಂದಿನ ಸುದ್ದಿ
Show comments