ಚಳಿಗಾಲಕ್ಕೆ ಮುನ್ನ ಡಾ ಸಿಎನ್ ಮಂಜುನಾಥ್ ಅವರ ಈ ಎಚ್ಚರಿಕೆ ಗಮನಿಸಿ

Krishnaveni K
ಮಂಗಳವಾರ, 9 ಸೆಪ್ಟಂಬರ್ 2025 (11:37 IST)
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತವೆ. ಇನ್ನೇನು ಮಳೆಗಾಲ ಮುಗಿದು ಚಳಿಗಾಲ ಬರುತ್ತಿದ್ದು ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅವರ ಈ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ.

ಚಳಿಗಾಲದಲ್ಲಿ ಕೇವಲ ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಮಾತ್ರವಲ್ಲ. ಹೃದಯದ ಸಮಸ್ಯೆಗಳು ಬರುವುದೂ ಹೆಚ್ಚಾಗುತ್ತದೆ. ಇದಕ್ಕೆ ಕಾರಣವೇನು ಎಂಬ ಬಗ್ಗೆ ಡಾ ಸಿಎನ್ ಮಂಜುನಾಥ್ ಅವರು ಸಂವಾದ ಕಾರ್ಯಕ್ರಮವೊಂದರಲ್ಲಿ ವಿವರವಾಗಿ ಹೇಳಿದ್ದರು.

ಚಳಿಗಾಲದಲ್ಲಿ ನಮ್ಮ ನರಗಳು ಕುಗ್ಗುವಿಕೆಗೊಳಗಾಗುತ್ತವೆ. ಇದರಿಂದ ರಕ್ತಪರಿಚಲನೆ ಕಡಿಮೆಯಾಗುತ್ತದೆ. ಉದಾಹರಣೆಗೆ ನೀವು ತಣ್ಣೀರಿನಲ್ಲಿ ಸ್ನಾನ ಮಾಡುವಾಗ ಒಮ್ಮೆ ಮೈ ನಡುಗಿ, ಮೈ ಕುಗ್ಗಿಸುತ್ತೇವೆ. ಅದೇ ರೀತಿ ವಿಪರೀತ ಚಳಿಗೆ ನಮ್ಮ ನರಗಳು ಕುಗ್ಗುವಿಕೆಗೊಳಗಾಗುತ್ತವೆ. ಇದರಿಂದ ರಕ್ತ ಪರಿಚಲನೆ ಕಡಿಮೆಯಾಗುತ್ತದೆ.

ಇದರಿಂದ ಹೃದಯಕ್ಕೂ ರಕ್ತ ಪೂರೈಕೆ ಕಡಿಮೆಯಾಗಬಹುದು. ವಿಶೇಷವಾಗಿ ಉತ್ತರ ಭಾರತದಲ್ಲಿ ವಿಪರೀತ ಶೀತ ದಾಖಲಾಗುವ ಸ್ಥಳಗಳಲ್ಲಿ ಚಳಿಯಿಂದಾಗಿ ಹೃದಯದ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚು. ಈ ವಾತಾವರಣದಲ್ಲಿ ಹೃದಯಕ್ಕೂ ರಕ್ತ ಪರಿಚಲನೆ ಕಡಿಮೆಯಾಗಿ ಹೃದಯಾಘಾತವಾಗು ಸಂಭವವಿರುತ್ತದೆ. ಹೀಗಾಗಿಯೇ ದುರ್ಬಲ ಹೃದಯಿಗಳು ವಿಪರೀತ ಶೈತ್ಯ ವಾತಾವರಣಕ್ಕೆ ಮೈ ಒಡ್ಡದಿರುವುದೇ ಉತ್ತಮ ಎಂದು ಅವರು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments