ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

Krishnaveni K
ಭಾನುವಾರ, 16 ನವೆಂಬರ್ 2025 (10:18 IST)
ಇತ್ತೀಚೆಗಿನ ದಿನಗಳಲ್ಲಿ ರಕ್ತದೊತ್ತಡ ಅಥವಾ ಬಿಪಿ ಎನ್ನುವುದು ಸರ್ವೇ ಸಾಮಾನ್ಯವಾಗಿದೆ. ಹಾಗಂತ ಇದನ್ನು ನಿರ್ಲ್ಯಕ್ಷ ಮಾಡುವಂತಿಲ್ಲ. ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು.

ಕೆಲವರಿಗೆ ಯಾವುದೋ ರೋಗಕ್ಕೆಂದು ವೈದ್ಯರ ಬಳಿ ಹೋದಾಗ ರಕ್ತದೊತ್ತಡ ಪರೀಕ್ಷೆ ನಡೆಸಿದಾಗಲೇ ರಕ್ತದೊತ್ತಡವಿದೆ ಎನ್ನುವುದು ಗೊತ್ತಾಗುತ್ತದೆ. ಕೆಲವರಲ್ಲಿ ಅದರ ಲಕ್ಷಣವೂ ಕಂಡುಬರುವುದಿಲ್ಲ. ಆದರೆ 30 ವರ್ಷ ವಯಸ್ಸು ದಾಟಿದ ಮೇಲೆ ಆಗಾಗ ಬಿಪಿ ಚೆಕ್ ಮಾಡುತ್ತಿರಬೇಕು.

ಡಾ ಸಿಎನ್ ಮಂಜುನಾಥ್ ಪ್ರಕಾರ ಬಹುತೇಕರು ಮಾಡುವ ತಪ್ಪು ಇದೇ. ಒಮ್ಮೆ ರಕ್ತದೊತ್ತಡ ಕಾಣಿಸಿಕೊಂಡಿತೆಂದು ಗುಳಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ನಂತರ ಔಷಧಿ ತೆಗೆದುಕೊಳ್ಳುವುದನ್ನೇ ಬಿಡುತ್ತಾರೆ. ಏನಾಗುತ್ತದೆ ನೋಡೋಣ ಎಂಬ ಯೋಚನೆ ಅವರದ್ದು.

ಆದರೆ ಇದು ತುಂಬಾ ತಪ್ಪು. ಒಮ್ಮೆ ರಕ್ತದೊತ್ತಡ ಕಾಣಿಸಿಕೊಂಡರೆ ವೈದ್ಯರ ಸಲಹೆ ತೆಗೆದುಕೊಳ್ಳದೇ ನೀವಾಗಿಯೇ ಔಷಧಿ ಬಿಡುವುದು ತಪ್ಪು. ಇದರಿಂದ ನೀವು ಮುಂದೆ ಗಂಭೀರ ಸಮಸ್ಯೆಗೆ ತುತ್ತಾಗಬೇಕಾದೀತು. ಕೆಲವೊಮ್ಮೆ ಪಾರ್ಶ್ವವಾಯುನಂತಹ ಗಂಭೀರ ಸಮಸ್ಯೆಯೂ ಎದುರಾಗಬಹುದು. ಹೀಗಾಗಿ ರಕ್ತದೊತ್ತಡವಿದ್ದರೆ ನಿಯಮಿತವಾಗಿ ಗುಳಿಗೆ ತೆಗೆದುಕೊಳ್ಳುವುದು ಮುಖ್ಯ ಎಂದು ಅವರು ಸಂವಾದವೊಂದರಲ್ಲಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಶಬರಿಮಲೆ ಯಾತ್ರೆಗೆ ಬರುವ ಭಕ್ತರಿಗೆ ವಿಶೇಷ ಷರತ್ತು ಹಾಕಿದ ಕೇರಳ ಆರೋಗ್ಯ ಇಲಾಖೆ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಮುಂದಿನ ಸುದ್ದಿ
Show comments