Webdunia - Bharat's app for daily news and videos

Install App

ಗ್ಯಾನವಾಪಿ ಮಸೀದಿ ಸಮೀಕ್ಷೆ ಅಂತ್ಯ, ಬಾವಿಯಲ್ಲಿ ಶಿವಲಿಂಗ ಪತ್ತೆ

Webdunia
ಸೋಮವಾರ, 16 ಮೇ 2022 (11:52 IST)
ನವದೆಹಲಿ: ಗ್ಯಾನವ್ಯಾಪಿ ಮಸೀದಿಯೊಳಗೆ ವಿಡಿಯೋ ಸಮೇತ ಸರ್ವೇ ಕಾರ್ಯ ಅಂತ್ಯಗೊಂಡಿದ್ದು, ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಅರ್ಜಿದಾರರ ಪರ ವಕೀಲ ಹೇಳಿದ್ದಾರೆ.
 
ಕೋರ್ಟ್‌ ಗ್ಯಾನವ್ಯಾಪಿ ಮಸೀದಿಯಲ್ಲಿ ವಿಡಿಯೋ ಸರ್ವೇ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಮಂಗಳವಾರ ಸರ್ವೇ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವಂತೆ ಆದೇಶಿಸಿತ್ತು. ಇದರ ಬೆನ್ನಲ್ಲೇ ಸರ್ಕಾರಿ ಅಧಿಕಾರಿಗಳ ತಂಡ ಸರ್ವೇ ಕಾರ್ಯ ಮಾಡಿದ್ದು, ಇಂದು ಅದು ಅಂತ್ಯಗೊಂಡಿದೆ ಎಂದು ವಕೀಲ ವಿಷ್ಣು ಜೈನ್‌ ಮಾಹಿತಿ ನೀಡಿದ್ದಾರೆ. ಜತೆಗೆ ಸಿವಿಲ್‌ ಕೋರ್ಟ್‌ಗೆ ಈ ಬಗ್ಗೆ ಮಾಹಿತಿ ನೀಡಿ, ಬಾವಿಯಲ್ಲಿ ಸಿಕ್ಕ ಶಿವಲಿಂಗಕ್ಕೆ ಸುರಕ್ಷತೆ ನೀಡುವಂತೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. 
 
ಅಲಹಾಬಾದ್‌ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಭಾರೀ ಸುರಕ್ಷತೆಯೊಂದಿಗೆ ಕೋರ್ಟ್‌ ನೇಮಿಸಿದ ಸಮಿತಿ ಸರ್ವೇ ಕಾರ್ಯ ಆರಂಭಿಸಿತ್ತು. ವಕೀಲ ಹರಿಶಂಕರ್‌ ಜೈನ್‌ ಮತ್ತು ವಿಷ್ಣು ಜೈನ್‌ ಅವರ ಪ್ರಕಾರ ಭಾನುವಾರ ಮಸೀದಿಯ ಒಳ ಪ್ರದೇಶದಲ್ಲಿ ದೇವಸ್ಥಾನವಿತ್ತು ಎನ್ನಲಾದ ಜಾಗದ ಸರ್ವೇ ಮಾಡಲಾಗಿದೆ. 
ಗ್ಯಾನವ್ಯಾಪಿ ಮಸೀದಿಯ ಪಶ್ಚಿಮ ಭಾಗದ ಬಾಗದಲ್ಲಿ ಹಿಂದೂ ದೇವಾಲಯವನ್ನು ಕೆಡವಿರುವ ಕುರುಹುಗಳಿವೆ ಎನ್ನಲಾಗಿದ್ದು ಅದರ ಫೋಟೊ ಕೂಡ ವೈರಲ್‌ ಆಗಿತ್ತು. ಉಳಿದ ಮೂರು ದಿಕ್ಕುಗಳ ಸರ್ವೇ ಶನಿವಾರವೇ ಅಂತ್ಯವಾಗಿತ್ತು ಮತ್ತು ಪಶ್ಚಿಮ ದಿಕ್ಕಿನ ಬಾಗಿಲನ್ನು ತೆರೆಸಿ ಭಾನುವಾರ ಸರ್ವೇ ಮಾಡಲಾಗಿದೆ. 
 
ಕಾಶಿ ವಿಶ್ವನಾಥ ಮಂದಿರದ ಭಾಗವನ್ನು ಕೆಡವಿ ಅಂದಿನ ಮುಘಲ್‌ ದೊರೆ ಔರಂಗಜೇಬ್‌ ಗ್ಯಾನವಾಪಿ ಮಸೀದಿ ಕಟ್ಟಿಸಿದ್ದ. ಈ ಮಸೀದಿಯಲ್ಲಿ ಶೃಂಗಾರ ಗೌರಿ, ಗಣೇಶ ಸೇರಿ ಅನೇಕ ದೇವರ ವಿಗ್ರಹಗಳಿವೆ. ಅವುಗಳ ಪೂಜೆಗೆ ಅವಕಾಶ ನೀಡಬೇಕು ಎಂಬ ಅರ್ಜಿ ವಾರಾಣಸಿ ಕೋರ್ಚ್‌ ಮುಂದಿದೆ. ಆದರೆ ಮಸೀದಿಯನ್ನು ಅನ್ಯಧರ್ಮದ ಚಟುವಟಿಕೆಗೆ ನೀಡುವುದು ಮಸೀದಿ ಕಮಿಟಿಗೆ ಇಷ್ಟವಿಲ್ಲ. ಇದು ವಿವಾದದ ಮೂಲ. ಆದರೆ, ಮಸೀದಿಯಲ್ಲಿ ನಿಜಕ್ಕೂ ಹಿಂದೂ ವಿಗ್ರಹಗಳು ಹಾಗೂ ಮಂದಿರದ ವಿನ್ಯಾಸಗಳು ಇವೆಯೇ ಎಂಬುದರ ಪತ್ತೆಗಾಗಿ ವಿಡಿಯೋ ಸಮೀಕ್ಷೆಗೆ ಕೋರ್ಚ್‌ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments