Webdunia - Bharat's app for daily news and videos

Install App

ಕಿಡ್ನ್ಯಾಪ್ ಪ್ರಕರಣ: ಎರಡು ಕನಸು ಚಿತ್ರದ ನಿರ್ದೇಶಕನ ಬಂಧನ

Webdunia
ಶನಿವಾರ, 27 ಮೇ 2017 (13:18 IST)
ಬೆಂಗಳೂರು: ಎರಡು ಕನಸು ಚಿತ್ರದ ನಿರ್ದೇಶಕ ಮದನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದ ಪ್ರಮೋಶನ್ ಸರಿಯಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಪ್ರಚಾರಕ ಪರಮೇಶ್ ಎಂಬುವರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದನ್ ರನ್ನು ಬಂಧಿಸಿದ್ದಾರೆ.
 
ಪರಮೇಶ್ ರನ್ನು ಕಳೆದ ನಾಲ್ಕು ದಿನಗಳ ಹಿಂದೆ ಬಸವೇಶ್ವರ ನಗರದ ಮನೆಯಿಂದ ಮದನ್ ತನ್ನ ಸ್ನೇಹಿತರೊಂದಿಗೆ ಅಪಹರಣ ಮಾಡಿಸಿದ್ದರು. ಮೂರು ದಿನ ಕಳೆದರು ಪರಮೇಶ್ ಮನೆಗೆ ಬಾರದಿದ್ದರಿಂದ ಪರಮೇಶ್ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಮಾಗಡಿ ರಸ್ತೆ ಪೊಲೀಸರು ಮದನ್ ರನ್ನು ಬಂಧಿಸಿದ್ದಾರೆ.
 
ಎರಡು ಕನಸು ಚಿತ್ರದ ಪ್ರಮೋಶನ್ ಗೆ ಮದನ್ ಪರಮೇಶ್ ಗೆ 16.3 ಲಕ್ಷ ರುಪಾಯಿ ನೀಡಿದ್ದರು. ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತಾದರೂ ಸೋಲು ಕಂಡಿತ್ತು. ಚಿತ್ರದ ಸೋಲಿಗೆ ಪ್ರಮೋಶನ್ ಸರಿಯಾಗಿ ಮಾಡದೇ ಇರುವುದೇ ಕಾರಣ ಎಂದು ನಿರ್ದೇಶಕ ಮದನ್ ಪರಮೇಶ್ ರನ್ನು 8 ಲಕ್ಷ ರುಪಾಯಿ ವಾಪಸ್ ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಪರಮೇಶ್ ನಿರಾಕರಿಸಿದ್ದರಿಂದ ಅವರನ್ನು ಅಪಹರಣ ಮಾಡಲಾಗಿದೆ ಎಂದು ತಿಳಿದುಬಂದಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments