Webdunia - Bharat's app for daily news and videos

Install App

ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಗೆ ಖುದ್ದು ಕ್ಷಮೆಯಾಚನೆಗೆ ಸುಪ್ರೀಂ ಸೂಚನೆ

Webdunia
ಶುಕ್ರವಾರ, 7 ಜುಲೈ 2017 (19:22 IST)
ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್‌ ಠಾಕೂರ್‌ ಬೇಷರತ್‌ ಕ್ಷಮಾಪಣೆ ಯಾಚಿಸುವಂತೆ ಸುಪ್ರೀಂಕೋರ್ಟ್‌ ಸೂಚಿಸಿದೆ. ಒಂದು ವೇಳೆ ಬೇಷರತ್ ಕ್ಷಮಾಪಣೆ ಕೇಳದೇ ಇದ್ದರೆ ನಿಂದನೆ ಪ್ರಕರಣದ ಕುರಿತ ವಿಚಾರಣೆಯನ್ನು ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
 
ಲೋಧಾ ಸಮಿತಿ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ವಿಳಂಬ ಧೋರಣೆ ತೋರಿದ ಪ್ರಕರಣಕ್ಕೆ ಅಂತ್ಯ ಹಾಡಬೇಕಾದರೆ ಇದೇ ಜುಲೈ 14ರಂದು ಸ್ವತಃ ಸುಪ್ರೀಂಕೋರ್ಟ್ ಗೆ ಹಾಜರಾಗಿ ಖುದ್ದು ಕ್ಷಮೆಯಾಚಿಸುವಂತೆ ಸೂಚಿಸಿದೆ. ಅಲ್ಲದೇ ಕ್ಷಮಾಪಣೆ ಅಫಿಡೆವಿಟ್‌ ಸಲ್ಲಿಸುವಂತೆಯೂ ತಿಳಿಸಿದೆ. ಒಂದು ವೇಳೆ ಠಾಕೂರ್‌ ಕ್ಷಮಾಪಣೆ ಕೇಳಿದರೆ ಅವರನ್ನು ಮನ್ನಿಸಿ ಅವರ ಮೇಲೆ ಹಾಕಲಾಗಿರುವ ನಿಂದನೆ ಪ್ರಕರಣವನ್ನು ರದ್ದುಪಡಿಸಲಾಗುವುದು ಎಂದೂ ಸುಪ್ರೀಂ ಪೀಠ ತಿಳಿಸಿದೆ.
 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅನುರಾಗ್ ಠಾಕೂರ್ ಇದು ನನ್ನು ವೈಯಕ್ತಿಕ ಸಂಘರ್ಷವಲ್ಲ. ಇದು ಕ್ರೀಡಾ ಇಲಾಖೆಯ ಸ್ವಾಯತ್ತತೆಯ ಸಂಘರ್ಷವಾಗಿತ್ತು. ನನಗೆ ಸುಪ್ರೀಂ ಕೋರ್ಟ್ ಬಗ್ಗೆ ಅಪಾರ ಗೌರವವಿದೆ ಎಂದು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments