Webdunia - Bharat's app for daily news and videos

Install App

ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕಗಳ ಘೋಷಣೆ

Webdunia
ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ‌ ಇಂದು‌ ಸಭೆ‌ ನಡೆಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪ್ರಮಾಣಿತ ಕಾರ್ಯಚರಣಾ ವಿಧಾನಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಅವರೂ ಸಹ, ಆರೋಗ್ಯ ಇಲಾಖೆಯ ಸಹಕಾರದ ಬಗ್ಗೆ ವಿಷದಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. 
ಅಲ್ಲದೇ ಇಂದು ನಡೆದ ಎರಡು ಗಂಟೆಗಳ ಸುದೀರ್ಘ ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು  ಪಾಲ್ಗೊಂಡಿದ್ದಾರೆ. ಇಲಾಖೆಯು ನೀಡಿರುವ ಎಸ್.ಓ.ಪಿ ಅನುಸರಣೆಗೆ ಬೇಕಾದ ಸಿದ್ಧತೆಗಳ ಕುರಿತು ತಮ್ಮ ಸದಭಿಪ್ರಾಯವನ್ನು ಎಲ್ಲ‌ ಜಿಲ್ಲಾಡಳಿತಗಳೊಂದಿಗೆ ಹಂಚಿಕೊಂಡಿದ್ದಾರೆ. 
 
ಹಾಗೆಯೇ ಮಾನ್ಯ ಮುಖ್ಯಮಂತ್ರಿಗಳನ್ನು ಇಂದು‌ ಸಭೆಗೆ ಮುನ್ನ ಖುದ್ದಾಗಿ ಭೇಟಿ ಮಾಡಿ ಪರೀಕ್ಷಾ ದಿನಾಂಕ ಪ್ರಕಟಣೆಗೆ ಮೌಖಿಕ ಒಪ್ಪಿಗೆ ಪಡೆಯಲಾಗಿದೆ ಎಂದು ಸುರೇಶ್ ಕುಮಾರ್‌ ವಿವರಣೆ ನೀಡಿದ್ದಾರೆ. 
 
ಆರೋಗ್ಯ ಇಲಾಖೆಯು ಸಿದ್ಧ ಪಡಿಸಿ‌ ನೀಡಿರುವ ಪ್ರಮಾಣಿತ ಕಾರ್ಯಚರಣಾ ವಿಧಾನಗಳ ಆಧಾರದಲ್ಲಿ‌ ಜುಲೈ ಮಾಹೆಯಲ್ಲಿ ನಿಗದಿತ ದಿನಾಂಕಗಳಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸುವ ವಿಶ್ವಾಸ ಇದೆ.  ಸುರಕ್ಷಿತವಾಗಿ ನಡೆಯಲಿರುವ ಈ ಪರೀಕ್ಷೆಗಳು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅವಶ್ಯವೆನ್ನುವುದನ್ನು ನಾವೆಲ್ಲ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments