ಮಹಾರಾಷ್ಟ್ರದಲ್ಲಿ ಭಾರೀ ಮಳೆ ಕೊಂಕಣ ರೈಲು ಸ್ಥಗಿತ : 6000 ಪ್ರಯಾಣಿಕರು ಅತಂತ್ರ

Webdunia
ಶುಕ್ರವಾರ, 23 ಜುಲೈ 2021 (07:58 IST)
ಮುಂಬೈ (ಜು.23): ವಾಣಿಜ್ಯ ನಗರಿ ಮುಂಬೈ ಹಾಗೂ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಗುರುವಾರ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಂಕಣ ಪ್ರದೇಶದಲ್ಲಿ ರೆಡ್ ಅಲರ್ಟ್ ಜಾರಿ ಮಾಡಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾ ಸಿಎಂ ಉದ್ಧವ್ ಠಾಕ್ರೆಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದು, ರಾಜ್ಯಕ್ಕೆ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ.


•ವಾಣಿಜ್ಯ ನಗರಿ ಮುಂಬೈ ಹಾಗೂ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಗುರುವಾರ ಭಾರೀ ಮಳೆ
•ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಭಾರೀ ಮಳೆ
•ಕೊಂಕಣ ಪ್ರದೇಶದಲ್ಲಿ ರೆಡ್ ಅಲರ್ಟ್ ಜಾರಿ

ಅಬ್ಬರಿಸುತ್ತಿದೆ ಮುಂಗಾರು! 12 ಜಿಲ್ಲೆಗಳಲ್ಲಿ ಭಾರೀ ಮಳೆ
ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಕೇಂದ್ರ ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ರತ್ನಗಿರಿ ಜಿಲ್ಲೆಯಲ್ಲಿ ಭೂಕುಸಿತದಿಂದ ಇಬ್ಬರು ಸಾವಿಗೀಡಾಗಿದ್ದಾರೆ. ರೈಲು ಹಳಿಗಳ ಮೇಲೆ ನೀರು ನಿಂತಿದ್ದರಿಂದ ಕೊಂಕಣ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರೈಲುಗಳಲ್ಲಿದ್ದ ಸುಮಾರು 6 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಅತಂತ್ರರಾಗಿದ್ದಾರೆ. ಭಾರೀ ಮಳೆಯ ಕಾರಣದಿಂದಾಗಿ 9 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರತ್ನಗಿರಿ, ರಾಯಗಢ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಇದೇ ವೇಳೆ ಪುಣೆಯ ಖಡಕ್ವಾಸ್ಲಾ ಅಣೆಕಟ್ಟು ತುಂಬಿ ಹರಿಯುತ್ತಿದ್ದು, ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೊಲ್ಹಾಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 93 ಮಿಲಿ ಮೀಟರ್ ಮಳೆ ಆಗಿದೆ. ಸತಾರಾ ಜಿಲ್ಲೆಯಲ್ಲಿ 480 ಮಿಲಿ ಮೀಟರ್ ಮಳೆ ಸುರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಹುದ್ದೆ ನಿರ್ಧಾರವಾಗಬೇಕಾದ್ರೆ ಇವರೊಬ್ಬರು ಬರಬೇಕು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜನಾರ್ಧನ ರೆಡ್ಡಿ ಮನೆ ಬಳಿ ಶೂಟೌಟ್: ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಪತ್ತೆ

ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಎಷ್ಟು ರೂಪಾಯಿ ಸಿಗುತ್ತದೆ

ಮುಂದಿನ ಸುದ್ದಿ
Show comments