Webdunia - Bharat's app for daily news and videos

Install App

ಮುಂಬೈನಲ್ಲಿ ಭಾರೀ ಮಳೆ, ಭೂಕುಸಿತಕ್ಕೆ 20 ಬಲಿ!

Webdunia
ಭಾನುವಾರ, 18 ಜುಲೈ 2021 (14:54 IST)
ಮಹಾರಾಷ್ಟ್ರ(ಜು.18): ಮುಂಬೈನಲ್ಲಿ ಮಳೆಯಬ್ಬರ ಕ್ಷಣ ಕ್ಷಣವೂ ಹೆಚ್ಚುತ್ತಿದ್ದು, ಜನ ಸಾಮಾನ್ಯರು ವರುಣನ ಅಬ್ಬರಕ್ಕೆ ಪರದಾಡುತ್ತಿದ್ದಾರೆ, ಈ ನಡುವೆ ಭೂಕುಸಿತದ ಎರಡು ಪ್ರಕರಣಗಳು ವರದಿಯಾಗಿದ್ದು, ಈ ಘಟನೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.



* ಮುಂಬೈನಲ್ಲಿ ಅಬ್ಬರಿಸುತ್ತಿದೆ ಮಳೆ
* ಮಳೆಯಬ್ಬರಕ್ಕೆ ಇಪ್ಪತ್ತಕ್ಕೂ ಅಧಿಕ ಮಂದಿ ಸಾವು
* ಭಾರೀ ಮಳೆ, ಭೂಕುಸಿತ ಜನರಿಗೆ ಮನೆ ಬಿಟ್ಟು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವಿ

 
ಹೌದು ಮುಂಬೈನ ವಿಕ್ರೋಲಿ ಹಾಗೂ ಚೇಂಬರ್ನಲ್ಲಿ ಮಳೆಯಬ್ಬರಕ್ಕೆ ಭೂಕುಸಿತ ಸಂಭವಿಸಿದ್ದು, ಅನೇಕ ಮನೆಗಳು ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದಿವೆ. ಎರಡು ವಿಭಿನ್ನ ಭೂಕುಸಿತ ಪ್ರಕರಣಗಳಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚು ಆತಂಕ ವ್ಯಕ್ತವಾಗಿದೆ.
ಕಳೆದ ರಾತ್ರಿಯಿಂದ ವಿಕ್ರೋಲಿ, ಚೇಂಬರ್ ಸೇರಿ ಮುಂಬೈನ ಬಹುತೇಕ ಎಲ್ಲಾ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ನಡುವೆ ಭೂಕುಸಿತ ಕೂಡಾ ಸಂಭವಿಸಲಾರಂಭಿಸಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಶೀಘ್ರವಾಗಿ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಕ್ಕೆ ತೆರಳುವಂತೆಯೂ ಅಧಿಕಾರಿಗಳು ಜನರಿಇಗೆ ಸೂಚಿಸಿದ್ದಾರೆ.
ನೀರಿನಬ ರಭಸಕ್ಕೆ ಕಾರುಗಳು ಕೊಚ್ಚಿ ಹೋಗುತ್ತಿದ್ದು, ವರುಣನ ಅಬ್ಬರ ಇಉಳಿಯದಿದ್ದಲ್ಲಿ ಮತ್ತಷ್ಟು ಹಾನಿ ಸಂಭವಿಸುವ ಭೀತಿಯೂ ಎದುರಾಗಿದೆ.
ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ಪರಿಹಾರ
ಇನ್ನು ಭೂಕುಸಿತದಲ್ಲಿ ಮೃತಪಟ್ಟವರ ಪರ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಘೋಷಿಸಿದ್ದಾರೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡವರಿಗೆ ಐವತ್ತು ಲಕ್ಷ ರೂಪಾಯಿ ನೀಡುವ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments