ಹಿಂದೂ ದೇವಾಲಯದ ನಿಯಂತ್ರಣ ಇನ್ನು ಮುಂದೆ ಹಿಂದೂಗಳ ಕೈಯಲ್ಲೇ ಇರಬೇಕು

Krishnaveni K
ಶನಿವಾರ, 21 ಸೆಪ್ಟಂಬರ್ 2024 (08:58 IST)
ತಿರುಪತಿ: ಹಿಂದೂ ದೇವಾಲಯಗಳ ನಿಯಂತ್ರಣ ಸರ್ಕಾರದ ಅಧೀನದಲ್ಲಿರದೇ ಇನ್ನು ಮುಂದೆ ಹಿಂದೂ ಸಮಾಜದ ಕೈಗೇ ಒಪ್ಪಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.

ತಿರುಪತಿ ತಿಮ್ಮಪ್ಪನ ಲಡ್ಡಿಗೆ ಪ್ರಾಣಿಗಳ ಕೊಬ್ಬು ಬಳಕೆ ಮಾಡುತ್ತಿದ್ದ ಆಘಾತಕಾರೀ ವಿಚಾರ ಬಹಿರಂಗವಾದ ಬಳಿಕ ವಿಎಚ್ ಪಿ ಇಂತಹದ್ದೊಂದು ಡಿಮ್ಯಾಂಡ್ ಮಾಡಿದೆ. ಕೇವಲ ವಿಶ್ವ ಹಿಂದೂ ಪರಿಷತ್ ಮಾತ್ರವಲ್ಲದೆ, ಹಲವು ಹಿಂದೂ ಕಾರ್ಯಕರ್ತರಿಂದಲೂ ಈ ಒತ್ತಾಯ ಕೇಳಿಬಂದಿದೆ.

ಬೇರೆ ಎಲ್ಲಾ ಧರ್ಮಗಳ ಪ್ರಾರ್ಥನಾ ಮಂದಿರಗಳು ಆಯಾ ಸಮಾಜದವರ ಅಧೀನದಲ್ಲೇ ಇರುವಾಗ ಹಿಂದೂ ದೇವಾಲಯಗಳಿಗೆ ಮಾತ್ರ ಸರ್ಕಾರದ ನಿಯಂತ್ರಣವೇಕೆ? ಸರ್ಕಾರದ ನಿಯಂತ್ರಣಗಳಿಂದಲೇ ಇಂತಹ ಎಡವಟ್ಟುಗಳು ನಡೆಯುತ್ತಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಈಗ ಸೋಷಿಯಲ್ ಮೀಡಿಯಾಗಳ ಮೂಲಕ ಆಕ್ರೋಶ ಹೊರಹಾಕಲು ಶುರು ಮಾಡಿದ್ದಾರೆ.

ಮೊದಲು ದೇಶದಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳ ಮೇಲೆ ಸರ್ಕಾರದ ನಿಯಂತ್ರಣ ನಿಲ್ಲಬೇಕು. ಹಿಂದೂ ಸಮಾಜದವರೇ ಆಯಾ ದೇವಾಲಯಗಳ ಆಡಳಿತ ನೋಡಿಕೊಳ್ಳುವಂತಾಗಬೇಕು. ಆಗ ಮಾತ್ರ ಇಂತಹ ಪ್ರಮಾದಗಳು ಆಗದಂತೆ ನೋಡಿಕೊಳ್ಳಬಹುದು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments