Webdunia - Bharat's app for daily news and videos

Install App

ಹಿಂದೂ ದೇವಾಲಯದ ನಿಯಂತ್ರಣ ಇನ್ನು ಮುಂದೆ ಹಿಂದೂಗಳ ಕೈಯಲ್ಲೇ ಇರಬೇಕು

Krishnaveni K
ಶನಿವಾರ, 21 ಸೆಪ್ಟಂಬರ್ 2024 (08:58 IST)
ತಿರುಪತಿ: ಹಿಂದೂ ದೇವಾಲಯಗಳ ನಿಯಂತ್ರಣ ಸರ್ಕಾರದ ಅಧೀನದಲ್ಲಿರದೇ ಇನ್ನು ಮುಂದೆ ಹಿಂದೂ ಸಮಾಜದ ಕೈಗೇ ಒಪ್ಪಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.

ತಿರುಪತಿ ತಿಮ್ಮಪ್ಪನ ಲಡ್ಡಿಗೆ ಪ್ರಾಣಿಗಳ ಕೊಬ್ಬು ಬಳಕೆ ಮಾಡುತ್ತಿದ್ದ ಆಘಾತಕಾರೀ ವಿಚಾರ ಬಹಿರಂಗವಾದ ಬಳಿಕ ವಿಎಚ್ ಪಿ ಇಂತಹದ್ದೊಂದು ಡಿಮ್ಯಾಂಡ್ ಮಾಡಿದೆ. ಕೇವಲ ವಿಶ್ವ ಹಿಂದೂ ಪರಿಷತ್ ಮಾತ್ರವಲ್ಲದೆ, ಹಲವು ಹಿಂದೂ ಕಾರ್ಯಕರ್ತರಿಂದಲೂ ಈ ಒತ್ತಾಯ ಕೇಳಿಬಂದಿದೆ.

ಬೇರೆ ಎಲ್ಲಾ ಧರ್ಮಗಳ ಪ್ರಾರ್ಥನಾ ಮಂದಿರಗಳು ಆಯಾ ಸಮಾಜದವರ ಅಧೀನದಲ್ಲೇ ಇರುವಾಗ ಹಿಂದೂ ದೇವಾಲಯಗಳಿಗೆ ಮಾತ್ರ ಸರ್ಕಾರದ ನಿಯಂತ್ರಣವೇಕೆ? ಸರ್ಕಾರದ ನಿಯಂತ್ರಣಗಳಿಂದಲೇ ಇಂತಹ ಎಡವಟ್ಟುಗಳು ನಡೆಯುತ್ತಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಈಗ ಸೋಷಿಯಲ್ ಮೀಡಿಯಾಗಳ ಮೂಲಕ ಆಕ್ರೋಶ ಹೊರಹಾಕಲು ಶುರು ಮಾಡಿದ್ದಾರೆ.

ಮೊದಲು ದೇಶದಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳ ಮೇಲೆ ಸರ್ಕಾರದ ನಿಯಂತ್ರಣ ನಿಲ್ಲಬೇಕು. ಹಿಂದೂ ಸಮಾಜದವರೇ ಆಯಾ ದೇವಾಲಯಗಳ ಆಡಳಿತ ನೋಡಿಕೊಳ್ಳುವಂತಾಗಬೇಕು. ಆಗ ಮಾತ್ರ ಇಂತಹ ಪ್ರಮಾದಗಳು ಆಗದಂತೆ ನೋಡಿಕೊಳ್ಳಬಹುದು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments