ಗಣೇಶನ ಕೂರಿಸುವವರು ಈ ತಪ್ಪು ಮಾಡಿದರೆ ಕಂಬಿ ಎಣಿಸುವುದು ಗ್ಯಾರಂಟಿ

Krishnaveni K
ಸೋಮವಾರ, 2 ಸೆಪ್ಟಂಬರ್ 2024 (08:57 IST)
ಬೆಂಗಳೂರು: ಇನ್ನೇನು ಗಣೇಶ ಹಬ್ಬ ಬರುತ್ತಿದ್ದು, ಈ ಬಾರಿ ಗಣೇಶನ ಮೂರ್ತಿಯನ್ನು ಗಲ್ಲಿ ಗಲ್ಲಿಯಲ್ಲಿ ಕೂರಿಸುವ ಮುನ್ನ ಸಾರ್ವಜನಿಕರು ಈ ಕೆಲವು ಅಂಶಗಳನ್ನು ಗಮನಿಸಬೇಕಾಗುತ್ತದೆ. ನಿಯಮ ಮೀರಿದರೆ ಈ ಬಾರಿ ಜೈಲೇ ಗ್ಯಾರಂಟಿಯಾಗಲಿದೆ.

`ಈ ಬಾರಿ ಗಣೇಶನ ಹಬ್ಬಕ್ಕೆ ಗಣೇಶನ ಕೂರಿಸಲು ಸರ್ಕಾರ ಕೆಲವೊಂದು ಕಟ್ಟುನಿಟ್ಟಿನ ನಿಯಮಾವಳಿಗಳನ್ನು ರೂಪಿಸಿದೆ. ಅದನ್ನು ಮೀರಿದರೆ ನಿಮ್ಮ ಮೇಲೆ ಕೇಸ್ ದಾಖಲಾಗಲಿದೆ. ಹಾಗಿದ್ದರೆ ಬಿಬಿಎಂಪಿ ಮತ್ತು ಬೆಂಗಳೂರು ಪೊಲೀಸರು ಸೇರಿಕೊಂಡು ಮಾಡಿರುವ ಹೊಸ ನಿಯಮಾವಳಿಗಳು ಏನು ಇಲ್ಲಿ ನೋಡಿ.

ಗಣೇಶನ ಮೂರ್ತಿಯನ್ನು ವಾಹನ ಸಾಗುವ ರಸ್ತೆ ಅಡ್ಡಗಟ್ಟಿ ಕೂರಿಸಿ ವಾಹನ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆ ತರುವಂತಿಲ್ಲ. ಮೊದಲನೆಯದಾಗಿ ಸಾರ್ವಜನಿಕವಾಗಿ ಗಣೇಶನ ಮೂರ್ತಿ ಇಡುವಾಗ ಬಿಬಿಎಂಪಿಯಿಂದ ಒಪ್ಪಿಗೆ ಪಡೆದಿರಬೇಕು. ಅದರಲ್ಲೂ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪನನ್ನು ಕೂರಿಸುವಂತಿಲ್ಲ. ಈ ರೀತಿ ಮಾಡಿದರೆ 6 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬೇಕಾಗಬಹುದು ಎಂದು ಬಿಬಿಎಂಪಿ ಹೇಳಿದೆ.

ಇನ್ನು ವಿವಾದಾತ್ಮಕ ಸ್ಥಳಗಳಲ್ಲಿ ಗಣೇಶನ ಕೂರಿಸುವುದು, ಗಣೇಶನ ಮೆರವಣಿಗೆ ನೆಪದಲ್ಲಿ ಬೇರೆಯವರಿಗೆ ತೊಂದರೆ ಮಾಡುವಂತಿಲ್ಲ. ಗಣೇಶನ ಕೂರಿಸ್ತೀವಿ ನೀವು ಚಂದಾ ನೀಡಲೇಬೇಕು ಎಂದು ಯಾರೂ ಬಲವಂತ ಮಾಡುವಂತಿಲ್ಲ. ಬಲವಂತವಾಗಿ ಹಣ ವಸೂಲಿ ಮಾಡಿದರೆ ಪೊಲೀಸರು ತಕ್ಕ ಕ್ರಮ ಕೈಗೊಳ್ಳಲಿದ್ದಾರೆ.

ಇನ್ನು ಗಣೇಶ ವಿಸರ್ಜನೆಯನ್ನು ಬಿಬಿಎಂಪಿ ಸೂಚಿಸಿದ ಸ್ಥಳಗಳಲ್ಲಿಯೇ ಮಾಡಬೇಕು. ವಿಸರ್ಜನೆ ಮಾಡುವ ವೇಳೆ ಮೆರವಣಿಗೆ ಮಾಡುವ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆದರೆ ಆಯೋಜಕರೇ ಹೊಣೆಗಾರರು. ದೊಡ್ಡದಾಗಿ ಡಿಜೆ ಸೌಂಡ್, ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ ಮಾಡುವಂತಿಲ್ಲ. ಗಣೇಶನ ವಿಸರ್ಜನೆ ಮಾಡುವುದಿದ್ದರೆ ರಾತ್ರಿ 10 ಗಂಟೆಯೊಳಗೆ ಮಾಡಿ ಮುಗಿಸಬೇಕು. ಇವಿಷ್ಟು ನಿಯಮಾವಳಿಯನ್ನು ಉಲ್ಲಂಘಿಸಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments