ಕನ್ನಡ ಪ್ರದೇಶಗಳ ಹೆಸರು ಬದಲಾವಣೆ

Webdunia
ಸೋಮವಾರ, 28 ಜೂನ್ 2021 (17:18 IST)
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸೇರಿದಂತೆ ಕನ್ನಡ ಪ್ರದೇಶಗಳ ಕೆಲವು ಗ್ರಾಮಗಳ ಹೆಸರುಗಳನ್ನು ಕೇರಳ ಸರ್ಕಾರ ಬದಲಾಯಿಸಲು ನಿರ್ಧರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇದು ಯಾವುದೇ ಕಾರಣಕ್ಕೂ ಸಾಧುವಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯಾವುದೇ ನಗರ, ಹಳ್ಳಿ ಇಲ್ಲವೇ ಸ್ಥಳದ ಹೆಸರುಗಳು ತನ್ನದೇ ಆದ ಮಹತ್ವ ಹಾಗೆಯೇ ಐತಿಹಾಸಿಕ ಹಿನ್ನೆಲೆಯೊಂದಿದ್ದು, ಅವುಗಳನ್ನು ಬದಲಾಯಿಸುವುದು ಆ ಭಾಗದ ಜನರ ಭಾವನೆಗಳಿಗೆ ಧಕ್ಕೆ ತರುವ ಕ್ರಮವಾಗಿದ್ದು, ಕನ್ನಡಿಗರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ  ಎಂದು ಹೇಳಿದರು. 
 
ಯಾವುದೇ ಸ್ಥಳದ ಹೆಸರನ್ನು ಯಾರು ಹೇಗೆಯೇ ಏನೇ ಬದಲಾಯಿಸಿದರೂ ಜನರು ಮಾತ್ರ ತಮ್ಮ ಹಳೆಯ ಹೆಸರುಗಳಿಂದಲೇ ಕರೆಯುತ್ತಾರೆ. ಯಾವುದೋ ದುರುದ್ದೇಶದಿಂದ  ಹೆಸರು ಬದಲಾವಣೆ ಮಾಡಿದ ಮಾತ್ರಕ್ಕೆ  ಆ ಸ್ಥಳಗಳ ಹೆಸರನ್ನು ಜನರ ಮನಸ್ಸಿನಿಂದ ಬದಲಾಯಿಸಲು ಸಾಧ್ಯವೇ ಆಗದು ಎಂದು ಸುರೇಶ್ ಕುಮಾರ್ ಹೇಳಿದರು. 
 
ಈ ಕುರಿತು ಕರ್ನಾಟಕ ಗಡಿ ಅಭಿವೃದ್ಧಿ ಮಂಡಳಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳು ಈಗಾಗಲೇ ಆ ರಾಜ್ಯಕ್ಕೆ ಪತ್ರ ಬರೆದು ಆ ಸ್ಥಳ ಹೆಸರುಗಳ ಮಹತ್ವವನ್ನು ತಿಳಿಸಿದ್ದಾರೆ. ಯಾವುದೇ ಕನ್ನಡ ಪ್ರದೇಶಗಳ  ಸ್ಥಳಗಳ ಹೆಸರುಗಳನ್ನು  ಬದಲಾಯಿಸಬಾರದೆಂದು ತಾನೂ ಆಗ್ರಹಿಸುತ್ತೇನೆ ಎಂದು   ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಮುಂದಿನ ಸುದ್ದಿ
Show comments