ಕೇರಳ: ಸತತ 6 ದಿನಗಳ ಬಳಿಕ 20,000ಕ್ಕಿಂತ ಕಡಿಮೆ ಪ್ರಕರಣ!

Webdunia
ಮಂಗಳವಾರ, 3 ಆಗಸ್ಟ್ 2021 (12:06 IST)
ತಿರುವನಂತಪುರಂ(ಆ.03): ಸತತ 6 ದಿನಗಳಿಂದ 20 ಸಾವಿರಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದ ಕೇರಳದಲ್ಲಿ ಸೋಮವಾರ ಹೊಸ ಕೇಸಿನ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ಸೋಮವಾರ ರಾಜ್ಯದಲ್ಲಿ 13984 ಕೇಸು ದಾಖಲಾಗಿದ್ದು, 118 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34.25 ಲಕ್ಷಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.65 ಲಕ್ಷದಷ್ಟಿದೆ. ಇನ್ನೊಂದೆಡೆ 6 ದಿನಗಳ ಬಳಿಕ ಪಾಸಿಟಿವಿಟಿ ದರ ಶೇ.11ಕ್ಕಿಂತ ಕಡಿಮೆ ದಾಖಲಾಗಿದೆ.
ದ.ಕ., ಉಡುಪಿ ಹಳ್ಳಿಗಳಲ್ಲಿ ಕೋವಿಡ್ ಸೋಂಕು ಉಲ್ಬಣ!
ಕೇರಳದ ಕೋವಿಡ್ ಸೋಂಕಿನ ಮಾರಕ ಪ್ರಭಾವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಕಾಣತೊಡಗಿದೆ. ರಾಜ್ಯದಲ್ಲಿ ಪ್ರಸ್ತುತ ಅತಿ ಹೆಚ್ಚು ಸೋಂಕು ಇರುವ 20 ಹಳ್ಳಿಗಳ ಪೈಕಿ 11 ಗ್ರಾಮಗಳು ಅವಿಭಜಿತ ದಕ್ಷಿಣ ಕನ್ನಡಕ್ಕೆ ಸೇರಿವೆ. ಅದೇ ರೀತಿ ಪಟ್ಟಣಗಳನ್ನು ಗಮನಿಸಿದರೆ ರಾಜ್ಯಾದ್ಯಂತ ಕೆಲ ಪಟ್ಟಣಗಳು ಕೋವಿಡ್ ಹಾಟ್ಸ್ಪಾಟ್ಗಳಾಗಿವೆ.
ಕಳೆದ ಏಳು ದಿನದಲ್ಲಿ ಹೊಸ ಪ್ರಕರಣಗಳು ಅತಿ ಹೆಚ್ಚು ಏರಿಕೆ ಆಗಿರುವ ಹಳ್ಳಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 6 ಮತ್ತು ಉಡುಪಿ ಜಿಲ್ಲೆಯ 5 ಗ್ರಾಮಗಳಿವೆ. ಕೊಡಗಿನ ಎರಡು, ಹಾಸನ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಮಂಡ್ಯ, ಬೆಂಗಳೂರು ನಗರ, ಚಿಕ್ಕಮಗಳೂರು ಜಿಲ್ಲೆಯ ತಲಾ ಒಂದು ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಮಲವೂರು ಮತ್ತು ಮುಂಡೂರ ಗ್ರಾಮಗಳು ಮೊದಲ ಮೂರು ಸ್ಥಾನದಲ್ಲಿವೆ. ನಂತರದ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮತ್ತು ಪೆರ್ಡೂರು ಹಾಗೂ ಉತ್ತರ ಕನ್ನಡದ ಹೊನ್ನಾವರ ಗ್ರಾಮಗಳಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments