Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನ ಮೇಲೆ ಚಾಕು ಇರಿತ

Sampriya
ಮಂಗಳವಾರ, 6 ಜನವರಿ 2026 (16:41 IST)
Photo Credit X
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರ ಕಾರು ಚಾಲಕನಿಗೆ  ಚಾಕು ಇರಿದ ಘಟನೆ ವರದಿಯಾಗಿದೆ. 

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಮೇಲೆ ಚಾಕು ದಾಳಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಧ್ಯಾಹ್ನ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ಚಾಕುವಿನಿಂದ ಏಕಾಏಕಿ ದಾಳಿ ನಡೆಸಿದ್ದಾರೆ.

ಬೈಕ್ ಮೇಲೆ ಬಂದು ಇಬ್ಬರು ಕಿಡಿಗೇಡಿಗಳು ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದಿದ್ದಾರೆ.

ಗಾಯಗೊಂಡ ಬಸವಂತ ಅವರನ್ನು ಕೂಡಲೇ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ಆಸ್ಪತ್ರೆಗೆ ಡಿಸಿಪಿ, ಎಸಿಪಿ ಹಾಗೂ ಮೃಣಾಲ್‌ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಲವು ವರ್ಷಗಳಿಂದ ಬಸವಂತ ಕಡೋಲ್ಕರ್ ಮೃಣಾಲ್‌ ಅವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದ ಮಾಹಿತಿ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್‌ಪಿಜಿ ಲಭ್ಯತೆಯಲ್ಲಿ ಸುಧಾರಿಕೆ, ಗ್ರಾಹಕರಿಗೆ ಕೇಂದ್ರದಿಂದ ಗುಡ್‌ನ್ಯೂಸ್‌

ದೆಹಲಿ ಸತ್ಯ ನಿಕೇತನ್ ಪಿಜಿ ದುರಂತ: ವಿದ್ಯಾರ್ಥಿಯ ದೇಹ ಹೊರತೆಗೆಯುವಾಗ ಏನಾಯ್ತು, ಮನಕಲಕುವ video

ವಿಧಾನಸೌಧದಿಂದ ಪಂಚಾಯಿತಿವರೆಗೆ ಕಾಂಗ್ರೆಸ್ಸಿಗರದ್ದು ಬರೀ ಗೂಂಡಾಗಿರಿ

ಓವರ್‌ ಮಾಡುವ ಪ್ರಯತ್ನ ಎಂತ ದೊಡ್ಡ ಅಪಘಾತಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ದಸರಾ ಸಂದರ್ಭದಲ್ಲಿ ಆನೆಗಳ ಲದ್ದಿ ಕಂಡರೆ ಜನರು ತುಳಿಯುತ್ತಾರೆ, ಕಾರಣ ಏನ್ ಗೊತ್ತಾ, Video

ಮುಂದಿನ ಸುದ್ದಿ
Show comments