Webdunia - Bharat's app for daily news and videos

Install App

ದೇವರಿಗೆ ನೋಟಿಸ್ ಜಾರಿಗೊಳಿಸಿದ ಅಧಿಕಾರಿಗಳು

Webdunia
ಸೋಮವಾರ, 8 ಜೂನ್ 2015 (09:05 IST)
ಇದು ಕಾಲ್ಪನಿಕ ಕತೆಯಲ್ಲ. ಮಧ್ಯಪ್ರದೇಶದಲ್ಲಿ ನಡೆದ ನೈಜ ಪ್ರಕರಣ. ರಸ್ತೆಗೆ ಸೇರಿದ ಜಾಗವನ್ನು ಅತಿಕ್ರಮಣ ಮಾಡಿಕೊಂಡಿರುವುದನ್ನು ಪ್ರಶ್ನಿಸಿ ದೇವಾಲಯವೊಂದರ ಮುಖ್ಯದೈವ ಹನುಮಾನ್‌ಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಭಿಂಡ್‌ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಬಜಾರಿಯಾ ಪ್ರದೇಶದಲ್ಲಿ ಹನುಮಾನ್ ದೇವಸ್ಥಾನವೊಂದಿದ್ದು, ಸಾರ್ವಜನಿಕ ರಸ್ತೆಗೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡು ದೇವಸ್ಥಾನವನ್ನು ನಿರ್ಮಿಸಲಾಗಿದೆ ಎಂಬುದು ಅಧಿಕಾರಿಗಳ ಆರೋಪ.
 
ಗ್ವಾಲಿಯರ್ ಹೈಕೋರ್ಟ್‌ ಕಟ್ಟಡವನ್ನು ತೆರವುಗೊಳಿಸುವಂತೆ ಆದೇಶಿಸಿದೆ.  ಅದನ್ನು ನಿರ್ಲಕ್ಷಿಸಿದ್ದ ದೇವಾಲಯದ ಅರ್ಚಕರಿಗೆ ಹಾಗೂ ಆಡಳಿತ ಮಂಡಳಿಗೆ ನಗರ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಬೇಕಿತ್ತು. ಆದರೆ ಅವರು ದೇವಸ್ಥಾನದ ಮುಖ್ಯದೈವ ಹನುಮಾನ್ ಹೆಸರಿನಲ್ಲಿ ನೋಟಿಸ್ ಜಾರಿಗೊಳಿಸಿದ್ದಾರೆ. 
 
ಆಂಜನೇಯನಿಗೆ ನೀಡಿದ ನೋಟಿಸ್‌ನಲ್ಲಿ ಹೀಗೆ ಬರೆಯಲಾಗಿದೆ: 'ನೀವು ಸಾರ್ವಜನಿಕ ರಸ್ತೆಗೆ ಸೇರಿದ ಸ್ಥಳವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದೀರಿ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಜೊತೆಗೆ ಅಪಘಾತಕ್ಕೆ ಆಹ್ವಾನ ನೀಡುತ್ತಿದೆ. ಕಟ್ಟಡ ತೆರವುಗೊಳಿಸುವಂತೆ  ಈ ಮೊದಲು ಅನೇಕ ಬಾರಿ ಸೂಚಿಸಿದ್ದರೂ ನೀವದಕ್ಕೆ ಸ್ಪಂದಿಸಿಲ್ಲ. ಗ್ವಾಲಿಯರ್ ಹೈ ಕೋರ್ಟ್‌ ನೀಡಿದ್ದ ಆದೇಶಕ್ಕೂ ನೀವು ಮನ್ನಣೆ ನೀಡಿಲ್ಲ.  ಹೀಗಾಗಿ ನಿಮ್ಮ ಮೇಲೆ ನ್ಯಾಯಾಂಗ ನಿಂದನೆ ದೂರು ದಾಖಲಿಸಲಾಗುತ್ತದೆ'.
 
ಈ ನೋಟಿಸ್‌ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ತಪ್ಪಾಗಿ ನೋಟಿಸ್ ಜಾರಿಯಾಗಿದೆ, ಆದಷ್ಟು ಬೇಗ ತಪ್ಪನ್ನು ತಿದ್ದಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿರುವ ಜಮೀರ್ ರಾಜೀನಾಮೆ ಕೊಡಬೇಕು: ಎನ್ ರವಿಕುಮಾರ್

Show comments