ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ಯಾವ ಹೆದರಿಕೆಯೂ ಇಲ್ಲ. ಕಾಂಗ್ರೆಸ್ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ಮಾತನಾಡುತ್ತಿದ್ದ ಅವರು, "ರಾಜ್ಯಪಾಲರು ಈ ಸಂಬಂಧದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿರುವುದು ನಿಜವೆಂದರು. ಕೆಎಂಸಿ ಆ್ಯಕ್ಟ್ ತಿದ್ದುಪಡಿಗೆ ವಿಶೇಷ ಅಧಿವೇಶನ ಕರೆದಿದ್ದೇವೆ ಎಂದು ಅವರು ತಿಳಿಸಿದರು.
ಬಿಬಿಎಂಪಿಯನ್ನು ವಿಭಜಿಸುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಘೋಷಿಸಿದ್ದೆವು. ಜನತೆಗೆ ನೀಡಿದ್ದ ವಾಗ್ದಾನದಂತೆ ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಲು ಹೊರಟಿದ್ದೇವೆ ಎಂದು ಅವರು ಬಿಬಿಎಂಪಿಯನ್ನು ವಿಭಾಗಿಸಲು ಹೊರಟಿರುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.