ಬಾಂಗ್ಲಾದೇಶ ಪ್ರತಿಭಟನೆಯಲ್ಲಿ ಹಿಂದೂಗಳ ಹತ್ಯೆಯಾದರೂ ಆರೋಪಿಗಳು ಬಚಾವ್ ಆಗ್ತಾರೆ

Krishnaveni K
ಮಂಗಳವಾರ, 13 ಆಗಸ್ಟ್ 2024 (14:54 IST)
ಢಾಕಾ: ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಅಲ್ಲಿನ ಅಲ್ಪ ಸಂಖ್ಯಾತರಾದ ಹಿಂದೂಗಳ ಮೇಲೆ ಸಾಕಷ್ಟು ದಾಳಿ, ಹತ್ಯೆ ನಡೆದಿದೆ. ಆದರೆ ಅಲ್ಲಿ ಇಂತಹ ಹೋರಾಟದಲ್ಲಿ ಹಿಂದೂಗಳ ಹತ್ಯೆ ಮಾಡಿದರೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತಿಲ್ಲ.

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿ ಸಂಘಟನೆ ಹೋರಾಟ ನಡೆಸಿತ್ತು. ಆದರೆ ಮೇಲ್ನೋಟಕ್ಕೆ ಇದು ಮೀಸಲಾತಿ ಹೋರಾಟವಾದರೂ ಇದರಲ್ಲಿ ಬಲಿಯಾಗಿದ್ದು ಅಲ್ಪಸಂಖ್ಯಾತ ಹಿಂದೂಗಳು. ಇದರ ಬಗ್ಗೆ ಭಾರತದ ಪ್ರಧಾನಿ ಮೋದಿ ಕೂಡಾ ಖಂಡನೆ ವ್ಯಕ್ತಪಡಿಸಿದ್ದರು.

ಇದೀಗ ಬಾಂಗ್ಲಾದೇಶದಲ್ಲಿ ಮೊಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ಜಾರಿಗೆ ಬಂದಿದ್ದು, ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆದ ದಾಳಿಗೆ ಕ್ಷಮೆ ಕೇಳಿದೆ. ಜೊತೆಗೆ ಹಿಂದೂಗಳ ಮೇಲೆ ದಾಳಿ ನಡೆಸದಂತೆ ಮನವಿ ಮಾಡಿದೆ. ಆದರೆ ಇದೆಲ್ಲವೂ ಕೇವಲ ಮನವಿ, ಕ್ಷಮೆಗಳಿಗೆ ಮಾತ್ರ ಸೀಮಿತ ಎಂದು ಈ ಹಿಂದಿನ ಘಟನಾವಳಿಗಳೇ ಹೇಳುತ್ತಿವೆ.

ಈ ಬಾರಿ ನಡೆದ ವಿದ್ಯಾರ್ಥಿಗಳ ಹೋರಾಟಕ್ಕೆ ಪ್ರತಿಪಕ್ಷ ಜಮಾತ್ ಇ ಇಸ್ಲಾಮ್ ಕೈವಾಡವಿದೆ ಎನ್ನಲಾಗಿದೆ. ಇದೇ ಸಂಘಟನೆಯೇ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಕುಮ್ಮಕ್ಕು ನೀಡುತ್ತಿರುವುದು. ಇದುವರೆಗೂ ನಡೆದಿರುವ ಇಂತಹ ದಾಳಿಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದ್ದೇ ಇಲ್ಲ. ಹೀಗಾಗಿಯೇ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಲೇ ಇದ್ದು, ಮುಂದೊಂದು ದಿನ ಇಲ್ಲಿ ಶೇ.100 ರಷ್ಟು ಹಿಂದೂಗಳೇ ಇಲ್ಲ ಎಂಬ ಪರಿಸ್ಥಿತಿ ಬರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments