ದಾದಿಯರ ಪ್ರತಿಭಟನೆಗೆ ಸಂಘದ ಮಾಜಿ ಪದಾಧಿಕಾರಿಗಳ ಕುಮ್ಮಕ್ಕು: ಅಪ್ಪಾಜಿಗೌಡ

Webdunia
ಗುರುವಾರ, 24 ಸೆಪ್ಟಂಬರ್ 2015 (16:27 IST)
ನೌಕರಿಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ನಗರದ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಅವರು ಪ್ರತಿಕ್ರಿಯಿಸಿದ್ದು, ಸಂಘದ ಒಳರಾಜಕೀಯಕ್ಕಾಗಿ ಆಸ್ಪತ್ರೆಯ ದಾದಿಯರು ಹಾಗೂ ವೈದ್ಯರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೂ ಕೂಡ ಉತ್ತಮ ರೀತಿಯಲ್ಲಿಯೇ ವೇತನ ನೀಡಲಾಗುತ್ತಿದೆ. ಆದರೆ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರು ವಿನಾಃ ಕಾರಣ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಈ ಪ್ರತಿಭಟನೆ ಹೀಗೆಯೇ ಮುಂದುವರಿದಲ್ಲಿ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು. 
 
ಇದೇ ವೇಳೆ, ಸಂಘದಲ್ಲಿ ಈ ಹಿಂದೆ ನಿರ್ದೇಶಕರಾಗಿ ಹಾಗೂ ಇತರೆ ಪದಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದ ಕೆಲವರು ವೈದ್ಯರು ಹಾಗೂ ದಾದಿಯರನ್ನು ಬಳಸಿಕೊಂಡು ಒಳ ರಾಜಕೀಯ ನಡೆಸುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ರೋಗಿಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಸಂಘಕ್ಕೆ ಆದಾಯವಿರುವುದೇ ಆಸ್ಪತ್ರೆಯಿಂದ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಟ್ಟು ಶಾಂತಿಯುತ ಮಾತುಕತೆಗೆ ಮುಂದಾಗಲಿ. ಸಮಸ್ಯೆಗಳನ್ನು ಪರಿಹರಿಸಲು ಆಸ್ಪತ್ರೆಯ ಆಡಳಿತ ಮಂಡಳಿ ಸಿದ್ಧವಿದೆ ಎಂದರು. 
 
ಇನ್ನು ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರು ಕಳೆದ ಎರಡು ದಿನಗಳಿಂದಲೂ ಕೂಡ ಪ್ರತಿಭಟನೆ ನಡೆಸುತ್ತಿದ್ದು, ನಾವು ಕಳೆದ ಹಲವು ವರ್ಷಗಳಿಂದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೆ ನಮ್ಮನ್ನು ಖಾಯಂಗೊಳಿಸಿಕೊಳ್ಳದೆ ಇತರೆ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ಮೂಲಕ ನಮ್ಮನ್ನು ಕೈ ಬಿಡುವ ಹುನ್ನಾರವನ್ನು ಆಸ್ಪತ್ರೆ ಆಡಳಿತ ಮಂಡಳಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ನೌಕರಿಯನ್ನು ಖಾಯಂಗೊಳಿಸಿಕೊಡಬೇಕೆಂದು ಒತ್ತಾಯಿಸುತ್ತಾ ಪ್ರತಿಭಟನೆ ಮುದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಪ್ಪಾಜಿಗೌಡ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ, ತನಿಖೆ ಸಂಬಂಧ ತೆರಳುತ್ತಿದ್ದ ಕಾರು ಚಾರ್ಮಾಡಿಯಲ್ಲಿ ಪಲ್ಟಿ

Show comments