Webdunia - Bharat's app for daily news and videos

Install App

ರೈಲಿನಡಿ ಬಗ್ಗಿ ಹೋಗಬೇಕು ಇಲ್ಲಿನ ಜನ!

Webdunia
ಶನಿವಾರ, 31 ಜುಲೈ 2021 (15:22 IST)
ಮಂಗಳೂರು ನಗರದ ಪಣಂಬೂರು ಪ್ರದೇಶದ ಜನರು ನಡೆದಾಡಲು ರಸ್ತೆ ಇಲ್ಲದೆ ರೈಲಿನಡಿಯೇ ನುಸುಳಿ ಓಡಾಡಬೇಕು ಎಂದರೆ ನೀವು ನಂಬಲೇಬೇಕು. ಹೌದು. ಸ್ಮಾರ್ಟ್ ಸಿಟಿಯಾಗಲಿರುವ ಮಂಗಳೂರಿನ ಈ ಪ್ರದೇಶದ ಜನರ ಪಾಡು ಹೇಳಿ ತೀರುವಂತಹದ್ದಲ್ಲ. 
ಪಣಂಬೂರು ಎನ್ಎಂಪಿಟಿಗೆ ಅದಿರು ಕೊಂಡೊಯ್ಯುವ ರೈಲು ಬಂದು ಈ ರಸ್ತೆಗಡ್ಡವಾಗಿ ನಿಂತಲ್ಲಿ ಈ ಪ್ರದೇಶದ ಜನರು ಮುಖ್ಯರಸ್ತೆಗೆ ಬರಬೇಕಾದಲ್ಲಿ ರೈಲಿನಡಿ ನುಸುಳಿಯೇ ಬರಬೇಕು. ಅದಿರು ಸರಬರಾಜು ಮಾಡಲು ಬರುವ ರೈಲು ದಿನಗಟ್ಟಲೆ, ಎರಡು ಮೂರು ದಿನಗಳ ಕಾಲವೂ ನಿಂತು ಲೋಡ್ ಮಾಡಲಾಗುತ್ತದೆ‌.
ರೈಲು ಇರುವಷ್ಟು ಕಾಲವೂ ಈ ಪ್ರದೇಶದ ಜನರ ಪಾಡು ಇದೇ ರೀತಿಯದ್ದಾಗಿರುತ್ತದೆ‌. ಪಣಂಬೂರಿನ ಈ ಪ್ರದೇಶದಲ್ಲಿ ಸಾಕಷ್ಟು ಮನೆಗಳಿದ್ದು, ಶಾಲೆಗಳು, ನೌಕರಿಗೆಂದು ಬರುವವರೂ ಇದ್ದಾರೆ. ಹಾಗಾಗಿ ಮಹಿಳೆಯರು, ಪುರುಷರು, ಮಕ್ಕಳೆನ್ನದೆ ಎಲ್ಲರೂ ರೈಲಿನಡಿ ತೂರಿಕೊಂಡು, ರೈಲಿನೆಡೆಯಲ್ಲಿ ಹತ್ತಿ ಇಳಿದು ಓಡಾಟ ಮಾಡಬೇಕಾಗುತ್ತೆ. 
ಇಲ್ಲಿನ ಪ್ರದೇಶದ ಜನರಿಗೆ ಮುಖ್ಯರಸ್ತೆಗೆ ಬರಲು ಇದೇ ಹತ್ತಿರದ ಮಾರ್ಗವಾಗಿದೆ‌. ಬೇರೆ ಬಳಸು ದಾರಿಯನ್ನು ಹಿಡಿದರೆ ಸುಮಾರು ಕಿ.ಮೀ.ಗಟ್ಟಲೆ ದೂರು ಕ್ರಮಿಸಬೇಕಾಗುತ್ತದೆ. ಆದ್ದರಿಂದ ಇಲ್ಲಿನ ಜನರಿಗೆ ರೈಲು ಬಂದು ನಿಂತಲ್ಲಿ ರೈಲಿನಡಿ ನುಸುಳಿ ಬರುವ ಪಾಡು ತಪ್ಪಿದ್ದಲ್ಲ. ಅಲ್ಲದೆ ರೈಲು ಸಂಚಾರ ಮಾಡುವಾಗಲೂ ಜನರು ಗಂಟೆಗಟ್ಟಲೆ ನಿಂತು ರೈಲು ಹೋಗುವವರೆಗೆ ಕಾಯಬೇಕಾಗುತ್ತದೆ‌. ಅಲ್ಲದೆ ಗೇಟ್ ಇಲ್ಲದ ಪರಿಣಾಮ ಇಲ್ಲಿನ ಜನರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಸಾಕಷ್ಟು ವರ್ಷಗಳಿಂದ ಈ ಸಮಸ್ಯೆಯಿದ್ದರೂ, ಯಾವ ರಾಜಕಾರಣಿಗಳೂ ಇಲ್ಲಿನ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಲ್ಲ. 
ಈ ಪ್ರದೇಶದಲ್ಲಿ ಸರಿಯಾಗಿ ರೈಲ್ವೇ ಗೇಟ್ ಇರದ ಕಾರಣ, ಓವರ್ ಬ್ರಿಡ್ಜ್ ಕೂಡಾ ಇಲ್ಲದಿರುವ ಪರಿಣಾಮ ಜನರ ನಿತ್ಯ ಪಾಡು ಪಡುತ್ತಿದ್ದಾರೆ‌. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments