Webdunia - Bharat's app for daily news and videos

Install App

ಮಾನವೀಯ ನೆಲೆಗಟ್ಟಿನಲ್ಲಿ ಕೊರೊನಾ ನಿರ್ವಹಣೆ: ರಾಜಕೀಯವಿಲ್ಲ ಎಂದರು ಪ್ರಧಾನಿ ಮೋದಿ

Webdunia
ಮಂಗಳವಾರ, 20 ಜುಲೈ 2021 (20:01 IST)
ಹೊಸ ದಿಲ್ಲಿ: ಕೊರೊನಾ ವೈರಸ್ ವಿರುದ್ಧದ ಸಮರವು ಕೇಂದ್ರ ಸರ್ಕಾರಕ್ಕೆ ರಾಜಕೀಯ ವಿಷಯ ವಸ್ತುವಲ್ಲ, ಇದೊಂದು ಮಾನವೀಯತೆಯ ವಿಚಾರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 ಹೈಲೈಟ್ಸ್:
•             100 ವರ್ಷಗಳ ಬಳಿಕ ಇಂಥಾದ್ದೊಂದು ಮಹಾ ಸಾಂಕ್ರಾಮಿಕ ವಿಶ್ವಕ್ಕೆ ಅಪ್ಪಳಿಸಿದೆ
•             100 ವರ್ಷಗಳ ಹಿಂದೆ ಜನರು ಹಸಿವಿನಿಂದ ಸಾವನ್ನಪ್ಪಿದ್ದರು
•             ಕಾಂಗ್ರೆಸ್ ನೀತಿ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ
ಹೊಸ ದಿಲ್ಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆ ಬಳಿಕ ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ ಅವರು ಕೊರೊನಾ ವೈರಸ್ ವಿರುದ್ಧದ ಸಮರವನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕೆಂದು ಹೇಳಿದ್ದಾರೆ ಎಂದರು.
100 ವರ್ಷಗಳ ಬಳಿಕ ಇಂಥಾದ್ದೊಂದು ಮಹಾ ಸಾಂಕ್ರಾಮಿಕವು ವಿಶ್ವಕ್ಕೆ ಅಪ್ಪಳಿಸಿದೆ. 100 ವರ್ಷಗಳ ಹಿಂದೆ ಜನರು ಹಸಿವಿನಿಂದ ಸಾವನ್ನಪ್ಪಿದ್ದರು. ಆದ್ರೆ, ಇದೀಗ ಭಾರೀ ಸಂಖ್ಯೆಯ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದ್ದೇವೆ. ಯಾರೊಬ್ಬರೂ ಹಸಿವಿನಿಂದ ನರಳಬಾರದು ಅನ್ನೋದು ನಮ್ಮ ಧ್ಯೇಯ. ಹೀಗಾಗಿ, ಈ ಜವಾಬ್ದಾರಿಯನ್ನು ನಿಭಾಯಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಇದೇ ವೇಳೆ ಕೊರೊನಾ ವೈರಸ್ ನಿರ್ವಹಣೆ ವಿಚಾರವಾಗಿ ವಿರೋಧ ಪಕ್ಷಗಳ ನಿಲುವಿಗೂ ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದರು ಎಂದು ಜೋಶಿ ತಿಳಿಸಿದರು. ಕಾಂಗ್ರೆಸ್ ಪಕ್ಷವು ಸಂಸತ್ ಕಲಾಪವನ್ನು ಸೂಕ್ತ ರೀತಿಯಲ್ಲಿ ನಡೆಯಲು ಬಿಡುತ್ತಿಲ್ಲ, ಕೊರೊನಾ ಲಸಿಕೆಯಿಂದ ಮೊದಲುಗೊಂಡು ಎಲ್ಲ ವಿಚಾರಗಳ ಸಂಬಂಧ ವಿನಾಕಾರಣ ತಗಾದೆ ತೆಗೆಯುತ್ತಿದೆ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಕೋವಿಡ್ ವಾರಿಯರ್ಸ್ಗಳಿಗೆ ಮೊದಲು ಲಸಿಕೆ ಸಿಗಬೇಕು ಎಂದೂ ಪ್ರಧಾನಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments