Webdunia - Bharat's app for daily news and videos

Install App

ಮಾನವೀಯ ನೆಲೆಗಟ್ಟಿನಲ್ಲಿ ಕೊರೊನಾ ನಿರ್ವಹಣೆ: ರಾಜಕೀಯವಿಲ್ಲ ಎಂದರು ಪ್ರಧಾನಿ ಮೋದಿ

Webdunia
ಮಂಗಳವಾರ, 20 ಜುಲೈ 2021 (20:01 IST)
ಹೊಸ ದಿಲ್ಲಿ: ಕೊರೊನಾ ವೈರಸ್ ವಿರುದ್ಧದ ಸಮರವು ಕೇಂದ್ರ ಸರ್ಕಾರಕ್ಕೆ ರಾಜಕೀಯ ವಿಷಯ ವಸ್ತುವಲ್ಲ, ಇದೊಂದು ಮಾನವೀಯತೆಯ ವಿಚಾರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 ಹೈಲೈಟ್ಸ್:
•             100 ವರ್ಷಗಳ ಬಳಿಕ ಇಂಥಾದ್ದೊಂದು ಮಹಾ ಸಾಂಕ್ರಾಮಿಕ ವಿಶ್ವಕ್ಕೆ ಅಪ್ಪಳಿಸಿದೆ
•             100 ವರ್ಷಗಳ ಹಿಂದೆ ಜನರು ಹಸಿವಿನಿಂದ ಸಾವನ್ನಪ್ಪಿದ್ದರು
•             ಕಾಂಗ್ರೆಸ್ ನೀತಿ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ
ಹೊಸ ದಿಲ್ಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆ ಬಳಿಕ ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ ಅವರು ಕೊರೊನಾ ವೈರಸ್ ವಿರುದ್ಧದ ಸಮರವನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕೆಂದು ಹೇಳಿದ್ದಾರೆ ಎಂದರು.
100 ವರ್ಷಗಳ ಬಳಿಕ ಇಂಥಾದ್ದೊಂದು ಮಹಾ ಸಾಂಕ್ರಾಮಿಕವು ವಿಶ್ವಕ್ಕೆ ಅಪ್ಪಳಿಸಿದೆ. 100 ವರ್ಷಗಳ ಹಿಂದೆ ಜನರು ಹಸಿವಿನಿಂದ ಸಾವನ್ನಪ್ಪಿದ್ದರು. ಆದ್ರೆ, ಇದೀಗ ಭಾರೀ ಸಂಖ್ಯೆಯ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದ್ದೇವೆ. ಯಾರೊಬ್ಬರೂ ಹಸಿವಿನಿಂದ ನರಳಬಾರದು ಅನ್ನೋದು ನಮ್ಮ ಧ್ಯೇಯ. ಹೀಗಾಗಿ, ಈ ಜವಾಬ್ದಾರಿಯನ್ನು ನಿಭಾಯಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಇದೇ ವೇಳೆ ಕೊರೊನಾ ವೈರಸ್ ನಿರ್ವಹಣೆ ವಿಚಾರವಾಗಿ ವಿರೋಧ ಪಕ್ಷಗಳ ನಿಲುವಿಗೂ ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದರು ಎಂದು ಜೋಶಿ ತಿಳಿಸಿದರು. ಕಾಂಗ್ರೆಸ್ ಪಕ್ಷವು ಸಂಸತ್ ಕಲಾಪವನ್ನು ಸೂಕ್ತ ರೀತಿಯಲ್ಲಿ ನಡೆಯಲು ಬಿಡುತ್ತಿಲ್ಲ, ಕೊರೊನಾ ಲಸಿಕೆಯಿಂದ ಮೊದಲುಗೊಂಡು ಎಲ್ಲ ವಿಚಾರಗಳ ಸಂಬಂಧ ವಿನಾಕಾರಣ ತಗಾದೆ ತೆಗೆಯುತ್ತಿದೆ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಕೋವಿಡ್ ವಾರಿಯರ್ಸ್ಗಳಿಗೆ ಮೊದಲು ಲಸಿಕೆ ಸಿಗಬೇಕು ಎಂದೂ ಪ್ರಧಾನಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments