Webdunia - Bharat's app for daily news and videos

Install App

ರಾಹುದೆಶೆ ಮತ್ತು ರಾಹು ದೋಷ

Webdunia
ಶುಕ್ರವಾರ, 21 ನವೆಂಬರ್ 2014 (16:30 IST)
ಕಂಟಕಶನಿ, ಸಾಡೆ ಸಾಥ್ ,ದಶಾಸಂಧಿ, ರಾಹು ಕೇತು ಇವೇ ಮೊದಲಾದುವುಗಳು ಗ್ರಹ ದೋಷಗಳಲ್ಲಿ ಪ್ರಧಾನವಾಗಿರುವವುಗಳು.ಜಾತಕ ಪ್ರಕಾರ ರಾಹು ದೆಶೆ ಅನುಭವಿಸುವವರು ಮತ್ತು ರಾಹು ಅನಿಷ್ಟ ಸ್ಥಾನದಲ್ಲಿರುವವರಿಗೆ ಕೆಲವು ಅಡಚಣೆಗಳು, ಮನೋವೇದನೆಗಳು ಅನುಭವಕ್ಕೆ ಬರುವುದು. 
 
ನವಗ್ರಹಗಳಲ್ಲಿ  ರಾಹುವಿಗೆ ಸರ್ಪದ ರೂಪವಿದೆ ಎಂದು ನಂಬಿಕೆ.ಆದುದರಿಂದಲೇ ಗ್ರಹ ಸ್ಥಾನದಲ್ಲಿ 'ಸ' ಎಂಬ ಅಕ್ಷರವನ್ನು ರಾಹುವಿನ ಸ್ಥಾನವನ್ನು ತೋರಿಸಲು ಬಳಸಲಾಗುತ್ತದೆ. ರಾಹು ಯಾವಾಗಲೂ ಒಂದೂವರೆ ಗಂಟೆಗಳಷ್ಟು ಕಾಲ ವಿಷವನ್ನು ಪಸರಿಸುತ್ತಾನೆ ಎಂಬ ಸಂಕಲ್ಪದಿಂದಾಗಿ ಈ ಕಾಲದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಕೈಗೊಳ್ಳುವುದಿಲ್ಲ.ಆದುದರಿಂದಲೇ ಶುಭ ಕಾರ್ಯನಿಮಿತ್ತ ಮನೆಯಿಂದ ಹೊರಡುವುದಾದರೆ ಈ ಘಳಿಗೆಯ ಮೊದಲು ಅಥವಾ ನಂತರ ಹೊರಡುವುದು ಸೂಕ್ತ.
ರಾಹುಕಾಲದಲ್ಲಿ ಪ್ರತಿದಿನವೂ ಪ್ರಾರ್ಥನೆ, ಬಲಿವಾಡು ಮೊದಲಾದವುಗಳನ್ನು ಕೈಗೊಂಡಲ್ಲಿ ದೋಷ ಪರಿಹಾರವಾಗುವುದು. ಭಾನುವಾರ ಸಂಜೆ 4.30 ರಿಂದ 6 ಗಂಟೆಯ ವರೆಗೆ ರಾಹುವಿಗೆ ಬಲಿವಾಡು ಅರ್ಪಿಸಲು ತಕ್ಕುದಾದ ಸಮಯವಾಗಿದೆ.
 
ಶಿವನ ಅವತಾರವಾದ ಶರಭೇಶ್ವರನನ್ನು ಪ್ರಾರ್ಥಿಸುವುದರಿಂದ ರಾಹುದೋಷ ಪರಿಹಾರವಾಗುವುದು. ರಾಶಿ ಚಕ್ರದಲ್ಲಿ ರಾಹುವಿನ ಇಷ್ಟ ಸ್ಥಾನವು 3,6,11 ಆಗಿದ್ದು ಮಿಥುನ ರಾಶಿ ಉಚ್ಛವೂ ಧನುರಾಶಿ ನೀಚವೂ ಆಗಿರುವುದು. 
 
ಶನಿಮಂಡಲ ಮತ್ತು ಗುರುಮಂಡಲದ ನಡುವೆ ರಾಹು ಕೇತುಗಳ ಸ್ಥಾನವಿರುವುದು. 18 ವರುಷಗಳನ್ನು ಬಳಸಿ ಅವುಗಳು ಸೂರ್ಯನ ಸುತ್ತ ಒಮ್ಮೆ ಭ್ರಮಣ ನಡೆಸುತ್ತವೆ. ಒಂದೂವರೆ ವರ್ಷಗಳಷ್ಟು ಕಾಲ ರಾಹು ಒಂದು ರಾಶಿಯಲ್ಲಿ ತಂಗುತ್ತದೆ.ಆ ರಾಶಿಯ ಏಳನೇ ರಾಶಿಯಲ್ಲಿ ಅಷ್ಟೇ ಸಮಯದ ವರೆಗೆ ಕೇತುವೂ ಇರುತ್ತದೆ. ಆದರೆ ಕೌತುಕದ ವಿಷಯವೇನೆಂದೆರ ರಾಹು ಕೇತುಗಳು ಹಿಂದಕ್ಕೆ ಚಲಿಸುವವುಗಳಾಗಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments