Webdunia - Bharat's app for daily news and videos

Install App

ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಬಿಡುಗಡೆ: 31ರಂದು ವಿಚಾರಣೆಗೆ ಹಾಜರು

Sampriya
ಸೋಮವಾರ, 27 ಮೇ 2024 (16:14 IST)
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಲೋಕಸಭೆ ಮತದಾನ ಬೆನ್ನಲ್ಲೇ ವಿದೇಶಕ್ಕೆ ಹಾರಿದ್ದ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

ಸದ್ಯಕ್ಕೆ ಅಜ್ಞಾತವಾಗಿರುವ ಪ್ರಜ್ವಲ್‌ ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿದ್ದಾರೆ. ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

 ಲೈಂಗಿಕ ದೌರ್ಜನ್ಯ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಎದುರು ಇದೇ 31ರಂದು ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಿ, ತಾತ ಎಚ್‌.ಡಿ. ದೇವೇಗೌಡ ಪತ್ರ, ಕುಮಾರಸ್ವಾಮಿ ಅವರ ಮನವಿಯ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ, ತಂದೆ-ತಾಯಿ, ತಾತನಿಗೆ ಕ್ಷಮೆಕೋರುತ್ತೇನೆ, ಜನತೆ, ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬಹಿರಂಗ ಪತ್ರ ಪ್ರಕಟಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿದ್ದರು. ತಕ್ಷಣ ಬಂದು ವಿಚಾರಣೆ ಎದುರಿಸುವಂತೆ ತಾಕೀತು ಮಾಡಿದ್ದರು. ಅಲ್ಲದೆ, ಮತ್ತೊಂದೆಡೆ ಪ್ರಜ್ವಲ್‌ ಅವರು ಪಾಸ್‌ಪೋರ್ಟ್‌ ರದ್ದು ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ಬಗ್ಗೆ ಪ್ರಜ್ವಲ್‌ ಅವರಿಗೂ ನೋಟಿಸ್‌ ಜಾರಿ ಮಾಡಿತ್ತು. ಅದರ ಬೆನ್ನಲ್ಲೇ ಭಾರತಕ್ಕೆ ವಾಪಸಾಗಲು ಪ್ರಜ್ವಲ್‌ ಸಿದ್ಧತೆ ನಡೆಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ