Webdunia - Bharat's app for daily news and videos

Install App

ಡಿ.ಕೆ.ರವಿ ಸಾವಿನ ಪ್ರಕರಣದ ಮರು ತನಿಖೆಗೆ ಅರ್ಜಿ ಸಲ್ಲಿಸಲು ವರದಿಯಾದರೂ ನೀಡಿ- ತಾಯಿಯ ಅಳಲು

Webdunia
ಶುಕ್ರವಾರ, 24 ನವೆಂಬರ್ 2017 (18:10 IST)
ಡಿ.ಕೆ ರವಿ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖಾ ವರದಿಯ ಪ್ರತಿ ನೀಡಿದರೆ ಮರು ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇನ್ನಾದರೂ ವರದಿ ನೀಡಬೇಕು ಎಂದು ಡಿ.ಕೆ.ರವಿ ತಾಯಿ ಗೌರಮ್ಮ ಅಳಲು ತೋಡಿಕೊಂಡಿದ್ದಾರೆ.

ಕುಟುಂಬದ ಪರಿಸ್ಥಿತಿಯ ಅರಿವಿದ್ದ ರವಿ ಸಾಯುವವನಲ್ಲ. ಆದ್ದರಿಂದ ಕೊಲೆ ಮಾಡಿರುವ ಸಾಧ್ಯತೆ ಇದೆ. ಈ ಸಾವಿನ ಪ್ರಕರಣವನ್ನು ಸಿಬಿಐ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ವರದಿ ನೀಡುತ್ತಿಲ್ಲ. ಅಧಿಕಾರಿಗಳು ಮುಖ್ಯಮಂತ್ರಿ ಹಿಡಿತದಲ್ಲಿ ಸಿಲುಕಿದ್ದಾರೆ. ವರದಿ ಪ್ರತಿ ದೊರೆಯದಂತೆ ಮಾಡುವ ಮೂಲಕ ಕೋರ್ಟಿಗೆ ಹೋಗುವುದನ್ನು ತಡೆಯುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ಡಿ.ಕೆ.ರವಿ ಸತ್ತಾಗ ನಾಲಿಗೆ ಹೊರಬಂದಿರಲಿಲ್ಲ. ಕುತ್ತಿಗೆಯ ಬಳಿ ಇಂಜಕ್ಷನ್ ಗುರುತು ಇತ್ತು. ನಮ್ಮ ಬೀಗ ಮಗನನ್ನು ಬೆಂಗಳೂರಿಗೆ ಕರೆದುಕೊಂಡು ಹೋದ ಮೂರು ತಿಂಗಳಲ್ಲಿ ರವಿ ಪ್ರಾಣ ಕಳೆದುಕೊಂಡಿದ್ದಾನೆ. ಸಚಿವ ಜಾರ್ಜ್, ನಾರಾಯಣ ಸ್ವಾಮಿ, ವರ್ತೂರು ಪ್ರಕಾಶ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಹೊಣೆಗಾರರಾಗಿದ್ದಾರೆ. ತೆರಿಗೆ ಕಟ್ಟದವರ ವಿರುದ್ಧ ಧ್ವನಿಯೆತ್ತಿದ್ದೆ ಜೀವಕ್ಕೆ ಮುಳುವಾಗಿದೆ ಎಂದರು.

ಡಿವೈಎಸ್ಪಿ ಗಣೇಶ ಕೊಲೆ ಪ್ರಕರಣದಲ್ಲೂ ನ್ಯಾಯ ದೊರೆತಿಲ್ಲ. ನನ್ನ ಮಗನ ಸಾವಿಗೂ ನ್ಯಾಯ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments