Webdunia - Bharat's app for daily news and videos

Install App

ಶಾಲಾರಂಭ: ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿಯಿಂದ ಬೆಸ್ಟ್ ಆಪ್ ಲಕ್

Webdunia
ಸೋಮವಾರ, 16 ಮೇ 2022 (11:10 IST)
ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿವೆ. ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು ಕೋವಿಡ್‌ ಪೂರ್ವ ಮಾದರಿಯ ಮಕ್ಕಳ ಕಲರವಕ್ಕೆ ಶಾಲೆಗಳು  ಸಾಕ್ಷಿಯಾಗಲಿವೆ.
 
ಇನ್ನು ಶಾಲೆ ಪ್ರಾರಂಭದ ಬಗ್ಗೆ ಮಾತನಾಡಿರುವ ಸಿಎಂ, ಬಹಳ ದಿನಗಳ ನಂತರ ಶಾಲೆ ಆರಂಭವಾಗ್ತಿದೆ. ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ. ಎಲ್ಲಾ ಮಕ್ಕಳಿಗೂ ಶಾಲೆಗೆಗಳಿಗೆ ಪ್ರೀತಿಯಿಂದ ಸ್ವಾಗತ ಕೊರುತ್ತೇನೆ. ಮಕ್ಕಳಿಗೆ ಶಿಕ್ಷಣ ಬಹಳ ಮುಖ್ಯ. ಒಳ್ಳೆಯ ವಾತವಾರಣದ ಶಾಲೆಯಲ್ಲಿ ಕಲಿತಾಗ ಮಕ್ಕಳಿಗೆ ಒಳ್ಳೆಯ ಪರಿಣಾಮ ಆಗುತ್ತೆ.
 
 ಪುಸ್ತಕ,ಬಟ್ಟೆ, ಸೈಕಲ್ ಬೇಕಾದ ಎಲ್ಲವನ್ನು ಕೊಡುವ ಕೆಲಸ ಮಾಡ್ತೀವಿ. ಎರಡು ವರ್ಷ ಶಾಲೆ ಆರಂಭವಾಗುವುದೇ ಅನಿಶ್ಚಿತೆ ಇತ್ತು, ಸರಿಯಾಗಿ ಶಾಲೆಗಳು ನಡೆದಿರಲಿಲ್ಲ.  ಈಗ ಶಾಲೆಗಳು ಆರಂಭವಾಗ್ತಿದೆ ಮುಂಬರುವ ದಿನಗಳಲ್ಲಿ ಎಲ್ಲವನ್ನೂ ನೀಡಿ ಒಳ್ಳೆಯ ವಾತವಾರಣ ನಿರ್ಮಾಣ ಮಾಡ್ತೀವಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರಿನ ಎಂಪ್ರೆಸ್‌ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಮಧ್ಯಾಹ್ನ 12.30ಕ್ಕೆ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ 2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam attack: ಪಹಲ್ಗಾಮ್ ದಾಳಿ ಮಾಡಿದ್ದೀರಿ ಎಂದರೆ ನಾನವನಲ್ಲ ಅಂತಿರೋ ಪಾಕಿಸ್ತಾನ ವಿರುದ್ಧ ಸಿಕ್ಕಿದೆ ಪ್ರಬಲ ಸಾಕ್ಷ್ಯ

Pehalgam attack:ಎನ್ಐಎ ತನಿಖೆಯಲ್ಲಿ ಪಹಲ್ಗಾಮ್ ಉಗ್ರರ ಯೋಜನೆ ಬಗ್ಗೆ ಮತ್ತಷ್ಟು ರೋಚಕ ವಿಚಾರಗಳು ಬಹಿರಂಗ

ಪೆಹಲ್ಗಾಮ್‌ ದಾಳಿ: ಸಾಮೂಹಿಕ ಸಂಕಲ್ಪ ಪ್ರದರ್ಶನಕ್ಕೆ ವಿಶೇಷ ಅಧಿವೇಶನ ಕರೆಯಲು ಕೇಂದ್ರಕ್ಕೆ ಖರ್ಗೆ ಆಗ್ರಹ

ಪೆಹಲ್ಗಾಮ್ ಮಾರಣಹೋಮದ ಬೆನ್ನಲ್ಲೇ 48 ಪ್ರವಾಸಿ ತಾಣಗಳಿಗೆ ಬಾಗಿಲು ಹಾಕಿದ ಸರ್ಕಾರ

ತೊಗಲುಗೊಂಬೆ ಕಲೆಯನ್ನು ವಿದೇಶದಲ್ಲೂ ಪರಿಚಯಿಸಿದ 103 ವರ್ಷದ ಕೊಪ್ಪಳದ ಭೀಮವ್ವಗೆ ಪದ್ಮಶ್ರೀ ಪ್ರದಾನ

ಮುಂದಿನ ಸುದ್ದಿ
Show comments