Webdunia - Bharat's app for daily news and videos

Install App

ಉಕ್ಕಿನ ಸೇತುವೆ ತಡೆಯಾಜ್ಞೆ ತೆರವು ಬಳಿಕ ಆರಂಭ : ಸಚಿವ ಕೆ.ಜೆ. ಜಾರ್ಜ್

Webdunia
ಶುಕ್ರವಾರ, 2 ಡಿಸೆಂಬರ್ 2016 (10:30 IST)
ಸಾರ್ವಜನಿಕರ ಹಿತದೃಷ್ಟಿ ಹಾಗೂ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ ಮತ್ತು ಇತರೆ ಬಡಾವಣೆಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಉಕ್ಕಿನ ಸೇತುವೆಯನ್ನು ನಿರ್ಮಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಸಧ್ಯ ಈ ವಿಚಾರ ರಾಷ್ಟ್ರೀಯ ಹಸಿರು ನ್ಯಾಯಪೀಠದ ಮುಂದೆ ಇದೆ. 
 
ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಂತಿಮ ತೀರ್ಮಾನದ ಬಳಿಕ ಮುಂದಿನ ಕ್ರಮ ವಹಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಕೆ.ಜೆ. ಜಾರ್ಜ್ ಹೇಳಿದರು. 
 
ಬದಲಿ ನಿವೇಶನಕ್ಕೆ ಕ್ರಮ: ಬೆಂಗಳೂರಿನ ಉತ್ತರ ಮತ್ತು ಪೂರ್ವ ತಾಲೂಕಿನ 16 ಗ್ರಾಮಗಳಲ್ಲಿ ಅರ್ಕಾವತಿ ಬಡಾವಣೆಯಲ್ಲಿ 606 ಎಕರೆ ಪ್ರದೇಶದಲ್ಲಿ 8730 ನಿವೇಶನಗಳನ್ನು ರಚಿಸಿ ಹಂಚಿಕೆ ಮಾಡಲಾಗಿದೆ. ಇವರಲ್ಲಿ 2970 ಹಂಚಿಕೆದಾರರಿಗೆ ನ್ಯಾಯಾಲಯದ ಆದೇಶದಂತೆ ಅಲ್ಲಿನ ನಿವೇಶನಗಳನ್ನು ನೋಂದಣಿ ಮಾಡಿಕೊಡಲು ಸಾಧ್ಯವಿಲ್ಲ. ಹಂಚಿಕೆದಾರರು ಬಯಸಿದರೆ ಬಡ್ಡಿ ಸಹಿತವಾಗಿ ಅವರ ಹಣ ಮರಳಿಸಲಾಗುವುದು ಅಥವಾ ಬೇರೆ ಬಡಾವಣೆಯಲ್ಲಿ ನಿವೇಶನ ಮಂಜೂರು ಮಾಡಲು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ರಾಜಣ್ಣ ಬಾಂಬ್

ಶಾಂಘೈ ಸಹಕಾರ ಸಂಸ್ಥೆ ದಾಖಲೆಗೆ ಸಹಿ ಹಾಕಲು ನಿರಾಕರಿಸಿದ ರಾಜನಾಥ್ ಸಿಂಗ್

ಅಲಕಾನಂದ ನದಿಗೆ ಉರುಳಿದ ಬಸ್: ತೀರ್ಥಯಾತ್ರೆಗೆ ಹೋದವರು ನೀರಿನಲ್ಲಿ ಕೊಚ್ಚಿ ಹೋದರು

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Viral video: ಫೈನ್ ಕಟ್ಟಿದ ಬಳಿಕ ಕಣ್ಣೀರು ಹಾಕಿದ ಚಾಲಕ: ಈತನ ಮಾತು ನಿಮಗೂ ನಿಜವೆನಿಸಬಹುದು

ಮುಂದಿನ ಸುದ್ದಿ
Show comments