Webdunia - Bharat's app for daily news and videos

Install App

ಬೆಂಗಳೂರಿನ ಐಕಾನಿಕ್ ಸಿಂಬಾಲ್ ಆಗಿದ್ದ ಶಂಕರ್ ನಾಗ್ ಚಿತ್ರಮಂದಿರ ಕಾರ್ಯಸ್ಥಗಿತ

Webdunia
ಶನಿವಾರ, 3 ಜೂನ್ 2017 (12:55 IST)
ಬೆಂಗಳೂರು:ಬೆಂಗಳೂರಿನ ಐಕಾನಿಕ್ ಸಿಂಬಾಲ್ ಆಗಿದ್ದ ಎಂಜಿ ರಸ್ತೆಯಲ್ಲಿರುವ ಶಂಕರನಾಗ್ ಚಿತ್ರಮಂದಿರ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಕಾರಣ ಬಿಬಿಎಂಪಿ ಒಡೆತನದಲ್ಲಿರುವ ಈ ಚಿತ್ರಮಂದಿರವನ್ನು ನಿರ್ವಹಿಸುವವರಿಲ್ಲದೇ ಮುಚ್ಚಲ್ಪಟ್ಟಿದೆ.
 
2005ರಲ್ಲೊಮ್ಮೆ ಚಿತ್ರಮಂದಿರ ನಿರ್ವಹಿಸಲು ಪ್ರದರ್ಶಕರು ಮುಂದೆ ಬಾರದ ಹಿನ್ನಲೆಯಲ್ಲಿ ಬೀಗ ಬಿದ್ದಿತ್ತು. ಬಳಿಕ 2009ರಲ್ಲಿ ನವೀಕರಣಗೊಂಡು ಮತ್ತೆ ಚಿತ್ರಮಂದಿರವನ್ನು ಗುತ್ತಿಗೆ ಪಡೆದಿದ್ದರು. ಕೇವಲ ಕನ್ನಡ ಸಿನಿಮಾಗಳನ್ನು ಮಾತ್ರ ಪ್ರದರ್ಶನ ಮಾಡಬೇಕು ಎಂಬ ಷರತ್ತಿನ ಮೇಲೆ ಕುಂಟುತ್ತಾ ಸಾಗುತ್ತಾ ಬಂದಿತ್ತು. ಆದರೆ ಈಗ ಚಿತ್ರಮಂದಿರಕ್ಕೆ ಮತ್ತೆ ಬೀಗಹಾಕಲಾಗಿದ್ದು, ಈಬಾರಿ ಶಾಶ್ವತವಾಗಿ ಮುಚ್ಚುವ ಲಕ್ಷಣಗಳು ಗೋಚರಿಸುತ್ತಿದೆ.
 
ಮಲ್ಟಿಫ್ಲೆಕ್ಸ್ ಗಳ ಭರಾಟೆಯಲ್ಲಿ ಸಿಂಗಲ್ ಸ್ಕ್ರೀನ್ ಥಿಯೇಟರ್ ಗಳು ನೆಲೆ ಕಳೆದುಕೊಳ್ಳುತ್ತಿವೆ. ಇದೇ ಕಾರಣಕ್ಕೆ ಶಂಕರ್ ನಾಗ್ ಚಿತ್ರಮಂದಿರ ಕೂಡ ಮುಚ್ಚಲಾಗುತ್ತದೆ ಎಂಬುದು ಬಿಬಿಎಂಪಿ ಅಧಿಕಾರಿಗಳ ಅಭಿಪ್ರಾಯ. 
 
ಅದರೆ ಚಿತ್ರ ನಿರ್ಮಾಪಕ, ಪ್ರದರ್ಶಕ ಜಾಕ್ ಮಂಜು ಹೇಳುವ ಪ್ರಕಾರ, ಬಿಬಿಎಂಪಿ ಅಧಿಕಾರಿಗಳ ವರ್ತನೆಯೇ ಚಿತ್ರಮಂದಿರ ಮುಚ್ಚಲು ಕಾರಣ. ನನ್ನಂತೆ ಹಲವರು ನಿರ್ಮಾಪಕರು ಚಿತ್ರಮಂದಿರ ನಿರ್ವಹಿಸಲು ಸಿದ್ಧರಿದ್ದಾರೆ. ಕೇವಲ ಕನ್ನಡ ಚಿತ್ರಗಳನ್ನು ಮಾತ್ರ ಪ್ರದರ್ಶಿಸುತ್ತೇವೆ ಎಂದು ಮೊದಲೆ ಬರೆದುಕೊಡುತ್ತೇವೆ. ಆದರೆ ಚಿತ್ರಮಂದಿರ ಗುತ್ತಿಗೆ ಪಡೆಯುವ ಪ್ರತಿಕ್ರಿಯೆಯಲ್ಲಿ ಪ್ರತಿಯೊಬ್ಬ ಅಧಿಕಾರಿಯನ್ನು ನಿರ್ವಹಿಸುವುದು, ಕಷ್ಟದ ಕೆಲಸ. ಏಕಗವಾಕ್ಷಿ ಪದ್ಧತಿ ಮೂಲಕ ಚಿತ್ರ ಮಂದಿರವನ್ನು ನಮಗೆ ನೀಡುವುದಾದರೆ ನಾವು ನಿರ್ವಹಿಸಲು ಸಿದ್ಧ ಎಂದು ಹೇಳುತ್ತಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments