ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ : ಸಿದ್ದರಾಮಯ್ಯ

Webdunia
ಭಾನುವಾರ, 9 ಜುಲೈ 2023 (14:16 IST)
ಬೆಂಗಳೂರು : ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರಿಗೆ ಗುತ್ತಿಗೆ ನೌಕರಿಯನ್ನ ಖಾಯಂ ನೇಮಕಾತಿ ಮಾಡುವ ಬಗ್ಗೆ ಕಾಂಗ್ರೆಸ್ ಸರ್ಕಾರದ ನಿರ್ಧಾರವೇನು? ಎಂಬ ಪ್ರಶ್ನೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸರ್ಕಾರಿ ಹುದ್ದೆ 7 ಲಕ್ಷಕ್ಕೂ ಹೆಚ್ಚಿದೆ.

ಐದು ಲಕ್ಷಕ್ಕೂ ಹೆಚ್ಚು ತುಂಬಿದೆ. ಎರಡೂವರೆ ಲಕ್ಷ ಖಾಲಿ ಇದೆ. ಅದಕ್ಕಾಗಿ ಹೊರಗುತ್ತಿಗೆ ಮಾಡಲಾಗಿದೆ ಎಂದು ಹೇಳಿದರು.  ಇದಕ್ಕೆ ಕಡಿವಾಣ ಹಾಕಬೇಕಿದ್ರೆ, ಖಾಲಿ ಇರೋ ಹುದ್ದೆ ತುಂಬುವುದು. ಕಾಂಟ್ರಾಕ್ಟ್ ಬೇಸಿಸ್ ತುಂಬುವಾಗ ಮೀಸಲಾತಿ ಇಲ್ಲ. ರಿಸರ್ವೇಷನ್ ಇಲ್ಲದಿದ್ರೆ, ಸಾಮಾಜಿಕ ನ್ಯಾಯ ಇರಲ್ಲ.

ನಮ್ಮ ಪ್ರಣಾಳಿಕೆಯಲ್ಲಿ ಕೂಡ ಖಾಲಿ ಹುದ್ದೆ ಭರ್ತಿ ಮಾಡೋದಾಗಿ ಹೇಳಿದ್ದೇವೆ. ಹೆಚ್ಚಾಗಿ ಶಿಕ್ಷಕರು, ಪೊಲೀಸ್, ಆರೋಗ್ಯ ಇಲಾಖೆಯಲ್ಲಿ ಖಾಲಿ ಇವೆ. ಅದನ್ನ ಹಂತ ಹಂತವಾಗಿ ತುಂಬುತ್ತೇವೆ ಎಂದು ಭರವಸೆ ನೀಡಿದರು. ಸರ್ಕಾರಿ ನೇಮಕಾತಿ ಆಗುವವರೆಗೂ ಹೊರಗುತ್ತಿಗೆಗೂ ಮೀಸಲಾತಿ ತರುವ ಚಿಂತನೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments