Publish Date: Mon, 04 Dec 2017 (21:47 IST)
Updated Date: Mon, 04 Dec 2017 (21:50 IST)
ರಾಜಕೀಯ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರುವ ಸಲುವಾಗಿ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡಲಾಗಿದೆ ಎಂದು ಸಿನಿಮಾ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.
ಪ್ರಜಾಕೀಯ ಪಕ್ಷದಲ್ಲಿ ಪ್ರಜೆಗಳೇ ನಾಯಕರಾಗಿದ್ದು, ಬೇರೆ ಯಾರೂ ಇಲ್ಲಿ ನಾಯಕರಿಲ್ಲ. ನಾನು ಪಕ್ಷಕ್ಕೆ ಸಾರಥಿ ಅಷ್ಟೇ ಎಂದು ತಿಳಿಸಿದ್ದಾರೆ.
ನಾನು ರಾಜಕಾರಣಿಯಲ್ಲ, ಪ್ರಜಾಕಾರಣಿ. ಸಮಾಜದಲ್ಲಿ ಸ್ವಚ್ಛ ಹಾಗೂ ಪಾರದರ್ಶಕ ಸರ್ಕಾರ ಸ್ಥಾಪನೆ ಮಾಡುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಕೈ ಹಾಕಿದ್ದೇನೆ. ಸಮಾಜದಲ್ಲಿ ಸಾಕಷ್ಟು ಜನರು ಬುದ್ದಿವಂತರಿದ್ದು, ಅವರು ಸ್ವಚ್ಛ ಆಡಳಿತಕ್ಕೆ ಕೈ ಜೋಡಿಸಬೇಕು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.