Webdunia - Bharat's app for daily news and videos

Install App

ಜಾಲಿ ರೈಡ್ ಮಾಡಲು ಹೋಗಿ ಪತ್ನಿಯೇ ಪತಿಯ ಜೀವಕ್ಕೆ ಕುತ್ತು ತಂದಳು!

Webdunia
ಭಾನುವಾರ, 30 ಏಪ್ರಿಲ್ 2017 (12:07 IST)
ಮುನ್ನಾರ್: ಬೇಸಿಗೆ ರಜಾ ಮಜಾ ಮಾಡಲು ಸಂಸಾರ ಸಮೇತ ಹೋಗಿದ್ದ ಕುಟುಂಬ ಈಗ ದುಃಖದ ಮಡುವಿನಲ್ಲಿದೆ. ಪತ್ನಿಯ ಅಚಾತುರ್ಯದಿಂದಾಗಿ ಮುಂದೆ ಸೈಕಲ್ ನಲ್ಲಿ ಜಾಲಿ ರೈಡ್ ಮಾಡುತ್ತಿದ್ದ ಪತಿ ಪ್ರಾಣ ಕಳೆದುಕೊಂಡ ಘಟನೆ ಕೇರಳದ ಮುನ್ನಾರ್ ನಲ್ಲಿ ನಡೆದಿದೆ.

 
ಬೆಂಗಳೂರು ಮೂಲದ ಮಲಯಾಳಿ ಅಶೋಕ್ ಸುಕುಮಾರನ್ ನಾಯರ್ ತೀರಿಕೊಂಡ ದುರ್ದೈವಿ. ಸಂಸಾರ ಸಮೇತ ಮುನ್ನಾರ್ ಪ್ರವಾಸಕ್ಕೆಂದು ಬಂದಿದ್ದ ದಂಪತಿ ಸುತ್ತಾಡಲು ಹೊರಟಿದ್ದಾರೆ. ಈ ವೇಳೆ ಸೈಕಲ್ ಪ್ರಿಯನಾದ ಪತಿ ಸೈಕಲ್ ನಲ್ಲಿ ಮುಂದೆ ಸಾಗುತ್ತಿದ್ದರೆ, ಹಿಂದಿನಿಂದ ಪತ್ನಿ ರಶ್ಮಿ ಕಾರು ಚಲಾಯಿಸಿಕೊಂಡು ಮಕ್ಕಳೊಡನೆ ಹಿಂಬಾಲಿಸುತ್ತಿದ್ದಳು.

ಈ ವೇಳೆ ಮಕ್ಕಳು ತುಂಟಾಟ ಮಾಡಿದರೆಂದು, ಪತ್ನಿ ಕಾರಿನ ಸ್ಟಿರಿಯೋ ಧ್ವನಿ ಹೊಂದಿಸುತ್ತಿದ್ದಾಗ ಸಮತೋಲನ ತಪ್ಪಿ ಮುಂದೆ ಸೈಕಲ್ ನಲ್ಲಿ ಚಲಿಸುತ್ತಿದ್ದ ಪತಿಗೆ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಅಶೋಕ್ ತಲೆಗೆ ಪೆಟ್ಟು ಬಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಮೃತಪಟ್ಟಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮೂಗಿನಿಂದ ತೀವ್ರ ರಕ್ತ ಸ್ರಾವವಾಗುತ್ತಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಪತ್ನಿ ಸಂಪೂರ್ಣ ಶಾಕ್ ಗೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments