Webdunia - Bharat's app for daily news and videos

Install App

ರಾಜ್ಯದಲ್ಲಿ ಪ್ರಗತಿ ಪರ ಮಹಿಳೆ

Webdunia
ಭಾನುವಾರ, 6 ಮಾರ್ಚ್ 2022 (18:31 IST)
ರೇಷ್ಮೆ ಬೆಳೆಗಾರರು ಅತಿ ಕಡಿಮೆ ಇರುವ ದೊಡ್ಡಬಳ್ಳಾಪುರಕ್ಕೆ 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರಗತಿ ಪರ ಮಹಿಳಾ ರೇಷ್ಮೆ ಬೆಳೆಗಾರರ ವಿಭಾಗದಿಂದ ನೀಡುವ ಪ್ರಶಸ್ತಿ ಸಿಕ್ಕಿದೆ.
 
ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿ ಸೀಗೆಹಳ್ಳಿ ಗ್ರಾಮದ ರತ್ನಮ್ಮ ರಾಮಯ್ಯಗೆ ರಾಜ್ಯ ಮಟ್ಟದ ಪ್ರಥಮ ಪ್ರಶಸ್ತಿ ಸಂದಿರುವುದು ಹುಬ್ಬೇರಿಸುವಂತೆ ಮಾಡಿದೆ.
ಕಸಬಾ ಹೋಬಳಿ ಮರಳೇನಹಳ್ಳಿ ಗ್ರಾಮದ ತಿಮ್ಮರಾಜು ಗಂಗಪ್ಪ ಪುರುಷ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
 
ವಿಶೇಷ ವರದಿ: ರೇಷ್ಮೆ ಕೃಷಿಯತ್ತ ಚಾಮರಾಜನಗರ ರೈತರ ಒಲವು
 
ನಂದಿ ಬೆಟ್ಟ, ಚನ್ನರಾಯಸ್ವಾಮಿ ಬೆಟ್ಟದ ಸಾಲಿನಲ್ಲಿ ಬರುವ ಸೀಗೆಹಳ್ಳಿ ಗ್ರಾಮದ ರತ್ಮಮ್ಮ ರಾಮಯ್ಯ ರಾಜ್ಯ ಮಟ್ಟದ ಸಾಧನೆ ಮಾಡಿ ದೊಡ್ಡಬಳ್ಳಾಪುರ ತಾಲೂಕಿಗೆ ಮಾದರಿಯಾಗಿದ್ದಾರೆ. 2020-21ನೇ ಸಾಲಿನಲ್ಲಿ ಕೇವಲ 1 ಎಕರೆ ಪ್ರದೇಶದಲ್ಲಿ ವಾರ್ಷಿಕವಾಗಿ ಉತ್ಪದನಾ ವೆಚ್ಚವನ್ನು ಹೊರತುಪಡಿಸಿ 3.83ಲಕ್ಷ ರೂಪಾಯಿ ಲಾಭ ಪಡೆಯುತ್ತಿದ್ದಾರೆ.
 
ರಾಮನಗರ: 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ
 
ರೈತರು ಸಾಲ ಮಾಡಿ ಆತ್ಮಹತ್ಯೆಗಳನ್ನು ಮಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇಂತಹ ಸಾಧಕ ರೈತರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು, ರೇಷ್ಮೆ ಇಲಾಖೆ ಅಧಿಕಾರಿಗಳ ಸಲಹೆಗಳನ್ನು ಚಾಚು ತಪ್ಪದೆ ಪಾಲಿಸುವ ಮೂಲಕ ನಮ್ಮನ್ನು ನಾವು ಸಮರ್ಥವಾಗಿ ಆರ್ಥಿಕವಾಗಿ ಕಟ್ಟಿಕೊಳ್ಳಬಹುದು ಎಂಬ ಅವರ ಸಾಧನೆ ಎಲ್ಲಾ ರೈತರಿಗೂ ಮಾದರಿಯಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments