Webdunia - Bharat's app for daily news and videos

Install App

ಕೆಎಸ್ಸಾರ್ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ

Webdunia
ಬುಧವಾರ, 21 ಜುಲೈ 2021 (08:00 IST)
ಬೆಂಗಳೂರು (ಜು.21): ಕೊರೋನಾ ಸೋಂಕು ತಗ್ಗಿದ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್ಆರ್ಟಿಸಿ) ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಸೋಮವಾರ ಒಂದೇ ದಿನ ನಿಗಮದ ವ್ಯಾಪ್ತಿಯಲ್ಲಿ 12.94 ಲಕ್ಷ ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ.


ನಿಗಮದ 16 ವಿಭಾಗಗಳ ಪೈಕಿ ಐದು ವಿಭಾಗಗಳಲ್ಲಿ ತಲಾ ಒಂದು ಲಕ್ಷಕ್ಕೂ ಅಧಿಕ ಮಂದಿ ಪ್ರಯಾಣಿಸಿದ್ದಾರೆ. ಉಳಿದ ವಿಭಾಗಗಳಲ್ಲಿ ಚಿತ್ರದುರ್ಗ ವಿಭಾಗ ಹೊರತುಪಡಿಸಿ 10 ವಿಭಾಗಗಳಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ.
•ಕೊರೋನಾ ಸೋಂಕು ತಗ್ಗಿದ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್ಆರ್ಟಿಸಿ) ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ
•ಒಂದೇ ದಿನ ನಿಗಮದ ವ್ಯಾಪ್ತಿಯಲ್ಲಿ 12.94 ಲಕ್ಷ ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ಕಳೆದ ಒಂದು ವಾರದಿಂದ ಹತ್ತು ಲಕ್ಷದ ಅಜುಬಾಜಿನಲ್ಲಿದ್ದ ಪ್ರಯಾಣಿಕರ ಸಂಖ್ಯೆ ಇದೀಗ 12 ಲಕ್ಷದ ಗಡಿ ದಾಟಿರುವುದು ನಿಗಮಕ್ಕೆ ಕೊಂಚ ನೆಮ್ಮದಿ ತಂದಿದೆ. ಕೊರೋನಾ ಪೂರ್ವದಲ್ಲಿ ನಿಗಮದ ಬಸ್ಸುಗಳಲ್ಲಿ ಪ್ರತಿ ನಿತ್ಯ ಸುಮಾರು 28 ಲಕ್ಷ ಮಂದಿ ಪ್ರಯಾಣಿಸುತ್ತಿದ್ದರು. ಕೊರೋನಾ ಲಾಕ್ಡೌನ್ ಸಡಿಲಿಕೆ ಬಳಿಕ ಪ್ರಯಾಣಿಕರ ಸಂಖ್ಯೆ 1 ಲಕ್ಷದೊಳಗೆ ಇಳಿಕೆಯಾಗಿತ್ತು.
ಅನ್ಲಾಕ್ ಬಳಿಕ ಪ್ರಯಾಣಿಕ ಸಂಖ್ಯೆ ಏರಿಕೆಯಾಗದ ಪರಿಣಾಮ ಸಾರಿಗೆ ಆದಾಯ ಡೀಸೆಲ್ ವೆಚ್ಚಕ್ಕೂ ಸಾಲುತ್ತಿರಲಿಲ್ಲ. ಇದೀಗ ಪ್ರಯಾಣಿಕರ ಸಂಖ್ಯೆ ಕೊಂಚವೇ ಏರಿಕೆಯಾಗುತ್ತಿದ್ದು, ಆದಾಯವೂ ವೃದ್ಧಿಸುತ್ತಿದೆ.
ಬಸ್ಸುಗಳ ಕಾರ್ಯಾಚರಣೆ ಕೊರೋನಾ ಪೂರ್ವದ ಸ್ಥಿತಿಗೆ ಮರುಳಲು ಸಮಯ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟುಏರಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಇದೀಗ ಕೊರೋನಾ ಸೋಂಕು ತಗ್ಗಿದ್ದು, ಜನ ಬಸ್ಗಳತ್ತ ಮುಖ ಮಾಡುತ್ತಿದ್ದಾರೆ. ನಿಗಮದಲ್ಲಿ ಸುಮಾರು 8,400 ಬಸ್ಸುಗಳಿದ್ದು, ಪ್ರಯಾಣಿಕರ ದಟ್ಟಣೆ ಹಾಗೂ ಅಗತ್ಯಕ್ಕೆ ಅನುಗುಣವಾಗಿ ನಿತ್ಯ ಸುಮಾರು 4,500 ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಯಾಣಿಕರ ಸಂಚಾರದ ಮಾಹಿತಿ
ದಿನಾಂಕ ಪ್ರಯಾಣಿಕರ ಸಂಖ್ಯೆ(ಲಕ್ಷ)
ಜು.19...12.94
ಜು.18....9.09
ಜು.17...10.66
ಜು.16....10.65
ಜು.15...10.97
ಜು.14.....10.96
ಜು.13....11.38
ಜು.19ಕ್ಕೆ 1 ಲಕ್ಷ ದಾಟಿದ ವಿಭಾಗ
ವಿಭಾಗ ಪ್ರಯಾಣಿಕರ ಸಂಖ್ಯೆ(ಲಕ್ಷ)
ರಾಮನಗರ...1,02,178
ತುಮಕೂರು...1,16,702
ಚಿಕ್ಕಬಳ್ಳಾಪುರ...1,05,550
ಮೈಸೂರು ನಗರ...1,08,272
ಚಾಮರಾಜನಗರ...1,01,454

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments