Webdunia - Bharat's app for daily news and videos

Install App

ಸ್ತ್ರೀಯಾಧಾರಿತ ಚುನಾವಣಾ ಪ್ರಣಾಳಿಕೆ: ಕುಮಾರ ಸ್ವಾಮಿ

Webdunia
ಶನಿವಾರ, 3 ಮೇ 2008 (16:52 IST)
ಮಹಿಳೆ, ಯುವಜನತೆ ಸ್ವಾವಲಂಬಿಯಾಗಿ ಬದುಕಲು ಬೇಕಾಗುವ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಪ್ರಣಾಳಿಕೆ ಜೆಡಿಎಸ್ ಬಿಡುಗಡೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೊಷಿಸಿದ್ದಾರೆ.

ನಗರದಲ್ಲಿ ಇಂದು (ಶನಿವಾರ) ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಂಡ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಜನರ ಆಶೋತ್ತರಗಳಿಗೆ ಪೂರಕವಾಗುವಂತಹ ಪ್ರಣಾಳಿಕೆಯನ್ನು ಜೆಡಿಎಸ್ ಜನತೆಗೆ ನೀಡಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಟೀಕಿಸಿದ ಅವರು, ಈಗಾಗಲೇ ನೀಡಿರುವ ಆಶ್ವಾಸನೆಗಳನ್ನೇ ಸಕಾರಗೊಳಿಸಲು ಸಾಧ್ಯವಾದ ಕಾಂಗ್ರೆಸ್, ಈಗ ಮತ್ತೆ ಆಶ್ವಾಸನೆಗಳ ಮಹಾಪೂರವೇ ನೀಡುತ್ತಿರುವುದು ವಿಷಾದನೀಯ ಎಂದು ವ್ಯಂಗ್ಯವಾಡಿದರು.

ಈ ಮಧ್ಯೆ ನಾಳೆ ಬಿಡುಗಡೆ ಮಾಡಲಿರುವ ಜೆಡಿಎಸ್ ಚುನಾವಣಾ ಪ್ರಣಾಳಿಕೆಯ ಅಂತಿಮ ತಯಾರಿ ಭರದಿಂದ ಸಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಈಗಾಗಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಪಕ್ಷದ ಸಾಧನೆಗಳ ಕುರಿತ ಸಿಡಿ ಬಿಡುಗಡೆ ಮಾಡಿರುವ ಜೆಡಿಎಸ್, ಕುಮಾರಸ್ವಾಮಿಯವರನ್ನೇ ನಾಯಕನನ್ನಾಗಿ ಬಿಂಬಿಸಿದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

Show comments