Webdunia - Bharat's app for daily news and videos

Install App

ಆಮ್ ಆದ್ಮಿ ಪಕ್ಷಕ್ಕೆ ನೀಡಿದ 45 ಕೋಟಿ ರೂಪಾಯಿ ದೇಣಿಗೆ ತಿರಸ್ಕರಿಸಿದ ಕೇಜ್ರಿವಾಲ್

Webdunia
ಶುಕ್ರವಾರ, 21 ಮಾರ್ಚ್ 2014 (19:22 IST)
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಲು ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಬಗ್ಗೆ ಆಮ್ ಆದ್ಮಿ ಪಕ್ಷ ಕಟ್ಟು ನಿಟ್ಟಿನ ನಿಲುವು ಅನುಸರಿಸುತ್ತಿದೆ.

ಆಮ್ ಆದ್ಮಿ ಪಕ್ಷದಿಂದ ಸಂಸತ್ತಿಗೆ ಸ್ಪರ್ಧಿಸುವ ಆಕಾಂಕ್ಷೆ ಹೊಂದಿರುವ ಅಭ್ಯರ್ಥಿಯೊಬ್ಬರು ಪಕ್ಷಕ್ಕೆ 45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದಾರೆ. ಆದರೆ, ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೇಣಿಗೆ ಹಣವನ್ನು ನಿರಾಕರಿಸಿದ್ದಾರೆ.

ಅಪರಿಚಿತ ಅಭ್ಯರ್ಥಿಯೊಬ್ಬ ಆಮ್ ಆದ್ಮಿ ಪಕ್ಷದ ಕಚೇರಿಗೆ 45 ಕೋಟಿ ರೂಪಾಯಿಗಳ ಚೆಕ್ ಕಳುಹಿಸಿ ನನಗೆ ಅಗತ್ಯವಾದ ಕ್ಷೇತ್ರದಲ್ಲಿ ಲೋಕಸಭೆ ಟಿಕೆಟ್ ನೀಡಬೇಕು ಮತ್ತು ನನ್ನ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಬಾರದು ಎನ್ನುವ ಮನವಿ ಮಾಡಿದ್ದರು.

ಆಮ್ ಆದ್ಮಿ ಪಕ್ಷ ರಾಜಕೀಯ ಪಕ್ಷವಾಗಿ ಅಸ್ತಿತ್ವಕ್ಕೆ ಬಂದ ನಂತರ ಇಲ್ಲಿಯವರೆಗೆ 35 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ಸ್ಲೀಕರಿಸಿದೆ.

ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಮಾತನಾಡಿ, ಪಕ್ಷ ಹಣದ ರಾಜಕೀಯ ಅಥವಾ ತೋಳಲ್ಬದ ರಾಜಕೀಯ ಮಾಡಲು ಕ್ಷೇತ್ರವನ್ನು ಪ್ರವೇಶಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶ ಮೂಲದ ಉದ್ಯಮಿಯೊಬ್ಬರು ರಾಜ್ಯದಲ್ಲಿ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದಲ್ಲಿ 2 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಪಕ್ಷಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಆಮ್ ಆದ್ಮಿ ಪಕ್ಷ ಅದನ್ನು ತಳ್ಳಿಹಾಕಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments