Webdunia - Bharat's app for daily news and videos

Install App

ಉಪಪ್ರಧಾನಿ ರೇಸ್‌ನಲ್ಲಿ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್

Webdunia
ಶುಕ್ರವಾರ, 28 ಮಾರ್ಚ್ 2014 (13:25 IST)
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆಯೋ ಇಲ್ಲವೋ ಆದರೆ, ಪಕ್ಷದ ಮುಖಂಡರಲ್ಲಿ ಉಪಪ್ರಧಾನಿ ಸೇರಿದಂತೆ ಹಲವಾರು ಹುದ್ದೆಗಳಿಗೆ ಭಾರಿ ಪೈಪೋಟಿ ಆರಂಭವಾಗಿದೆ.

ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ತಾವು ಕೂಡಾ ಉಪಪ್ರದಾನಿ ಆಕಾಂಕ್ಷಿ ಎಂದು ಹಲವಾರು ಬಾರಿ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಇದೀಗ ಸುಷ್ಮಾ ಸ್ವರಾಜ್ ಕೂಡಾ ಉಪಪ್ರಧಾನಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಬಿಜೆಪಿ ಅನಾಮಧೇಯ ಮೂಲಗಳು ತಿಳಿಸಿವೆ.

ಬಿಜೆಪಿಯೇನಾದರೂ ಅಧಿಕಾರಕ್ಕೆ ಬಂದರೆ ಪ್ರಧಾನಿ ಯಾರಾಗುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಆದರೆ, ಉಪಪ್ರಧಾನಿ ಹುದ್ದೆಗೆ ಸಂಬಂಧಿಸಿ ತಿಕ್ಕಾಟ ನಡೆಯುವ ಸೂಚನೆಗಳು ಈಗಲೇ ಸಿಗಲಾರಂಭಿಸಿವೆ.

ಇತ್ತೀಚೆಗಷ್ಟೇ ಬಿಜೆಪಿ ಮಿತ್ರ ಪಕ್ಷವಾದ ಅಕಾಲಿದಳ ಅರುಣ್ ಜೇಟ್ಲಿ ಉಪಪ್ರಧಾನಿಯಾಗಲಿದ್ದಾರೆ ಎಂದಿತ್ತು. ಈಗ ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾಸ್ವರಾಜ್ ಉಪಪ್ರಧಾನಿಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಮಧ್ಯಪ್ರದೇಶದ ಸಚಿವ ಸುರೇಂದ್ರ ಪತ್ವಾ. ಪತ್ವಾ ಅವರು ಸುಷ್ಮಾ ಉಪಸ್ಥಿತಿಯಲ್ಲೇ ಈ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments