Webdunia - Bharat's app for daily news and videos

Install App

ದೆಹಲಿ ಲೋಕಸಭಾ ಕ್ಷೇತ್ರಕ್ಕೆ ಆಮ್ ಆದ್ಮಿಯಿಂದ ರಾಖಿ ಬಿರ್ಲಾ ಕಣಕ್ಕೆ

Webdunia
ಮಂಗಳವಾರ, 18 ಮಾರ್ಚ್ 2014 (19:31 IST)
PTI
ಕ್ರಿಮಿನಲ್ ಕೇಸ್‍ನಲ್ಲಿ ಕಾಣಿಸಿಕೊಂಡಿರುವ ಕಾರಣಕ್ಕೆ ಈಗಾಗಲೇ ಉತ್ತರಪಶ್ಚಿಮ ದೆಹಲಿ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಲ್ಪಟ್ಟಿದ್ದ ಮಹೇಂದ್ರಸಿಂಗ್‌ರನ್ನು ಅನರ್ಹಗೊಳಿಸಿರುವ ಆಮ್ ಆದ್ಮಿ ಪಕ್ಷ, ಸಿಂಗ್ ಬದಲಿಗೆ ಮಾಜಿ ಸಚಿವೆ ರಾಖಿ ಬಿರ್ಲಾರವರನ್ನು ಕಣಕ್ಕಿಳಿಸಲಿದೆ.

ಈ ಕುರಿತು ಆಪ್ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲವಾದರೂ ಸಾಮಾಜಿಕ ಕಾರ್ಯಕರ್ತ ಸಿಂಗ್, ವಿರುದ್ಧ ಪ್ರಕರಣ ದಾಖಲಾಗಿರುವ ವಿಷಯ ನಮಗೆ ಗೊತ್ತಿರಲಿಲ್ಲ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪಿಕೊಂಡಿದ್ದಾರೆ ಎಂದು ಅಪ್ ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಂಗ್ "ಪಕ್ಷದ ನಿರ್ಧಾರದ ವಿರುದ್ಧ ನಾನು ದೂರುವುದಿಲ್ಲ. ಈಗಲೂ ನಾನು ಪಾರ್ಟಿಯ ಕಾರ್ಯಕರ್ತನಾಗಿ ಉಳಿಯುತ್ತೇನೆ ಮತ್ತು ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ. ಅತ್ಯುತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪಕ್ಷ ಸ್ವತಂತ್ರವಾಗಿದೆ "ಎಂದು ಹೇಳಿದ್ದಾರೆ.

ಮಾಜಿ ಪತ್ರಕರ್ತೆಯಾಗಿರುವ ರಾಖಿ ಬಿರ್ಲಾ 49 ದಿನಗಳ ಕೇಜ್ರಿವಾಲ್ ಸರಕಾರದಲ್ಲಿ ಎಲ್ಲರಿಗಿಂತ ಕಿರಿಯ ಸಚಿವೆಯಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments