Webdunia - Bharat's app for daily news and videos

Install App

ನರೇಂದ್ರ ಮೋದಿಯನ್ನು ಬೆಂಬಲಿಸಿಲ್ಲ: ಉಲ್ಟಾ ಹೊಡೆದ ಶ್ರೀ ಶ್ರೀ ರವಿಶಂಕರ ಗುರೂಜಿ

Webdunia
ಶನಿವಾರ, 22 ಮಾರ್ಚ್ 2014 (15:14 IST)
PTI
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ನಾನು ಹೇಳಿಲ್ಲ ಎಂದು ಶ್ರೀ ಶ್ರೀ ರವಿಶಂಕರ ಗುರೂಜಿ ಇದೀಗ ಉಲ್ಟಾ ಹೊಡೆದಿದ್ದಾರೆ.

ಕೆಲ ದಿನಗಳ ಹಿಂದೆ ದೇಶದ ಅಡಳಿತದ ಚುಕ್ಕಾಣಿ ರಾಹುಲ್‌ನಂತ ಯುವಕರಿಗೆ ಸೂಕ್ತವಲ್ಲ. ಮೋದಿಯಂತಹ ಅನುಭವಿಗಳು ಅಡಳಿತ ಚುಕ್ಕಾಣಿ ಹಿಡಿಯಬೇಕು ಎಂದು ಹೇಳಿಕೆ ನೀಡಿದ್ದ ಧಾರ್ಮಿಕ ಗುರು ಇದೀಗ ಮತ್ತೊಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ.

ಬಿಜೆಪಿ ಪಕ್ಷಕ್ಕೆ ಮತ ಹಾಕಿ ಎಂದು ಜನತೆಗೆ ನಾನು ಯಾವತ್ತೂ ಹೇಳಿಲ್ಲ. ಆದರೆ, ಕೇಂದ್ರದಲ್ಲಿ ಸ್ಥಿರ ಸರಕಾರ ಅಧಿಕಾರಕ್ಕೆ ಬರಬೇಕು ಎನ್ನುವುದೇ ನಮ್ಮ ಬಯಕೆ ಎಂದರು.

ದೇಶದ ಕೆಲ ಮಾಧ್ಯಮಗಳು ಗುಜರಾತ್‌ನಲ್ಲಿ ಮೋದಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿರುವುದನ್ನು ಮಾತ್ರ ನಾನು ಉಲ್ಲೇಖಿಸಿದ್ದೆ ಎಂದು ಹೇಳಿ ನುಣುಚಿಕೊಂಡಿದ್ದಾರೆ.

ಕಳೆದ 2002ರಲ್ಲಿ ಗುಜರಾತ್ ದಂಗೆಯಾದಾಗ ಮುಖ್ಯಮಂತ್ರಿ ನರೇಂದ್ರ ಮೋದಿ ಹೊಸ ಮುಖ್ಯಮಂತ್ರಿಯಾಗಿದ್ದರು. ಅವರಿಗೆ ಅನುಭವವಿರಲಿಲ್ಲ. ಇದೀಗ ತುಂಬಾ ಅನುಭವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದ ಪ್ರತಿಯೊಂದು ಪಕ್ಷಗಳು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನು ಮೊದಲೇ ಘೋಷಿಸಬೇಕು. ದೇಶದ ಜನತೆಗೆ ತಮ್ಮ ಪ್ರಧಾನಿಯಾಗುವ ವ್ಯಕ್ತಿಯ ಬಗ್ಗೆ ಸಂಪೂರ್ಣ ಮಾಹಿತಿಯಿರಬೇಕು ಎಂದು ಶ್ರೀ ಶ್ರೀ ಶ್ರೀ ರವಿಶಂಕರ್ ಸಲಹೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments