Webdunia - Bharat's app for daily news and videos

Install App

ನರೇಂದ್ರ ಮೋದಿ ಪ್ರಧಾನಿಯಾಗುವ ಅವಸರದಲ್ಲಿದ್ದಾರೆ: ಉಲ್ಟಾ ಹೊಡೆದ ಬಾಬಾ ರಾಮದೇವ್

Webdunia
ಸೋಮವಾರ, 17 ಮಾರ್ಚ್ 2014 (15:02 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸುವ ಅವಸರದಲ್ಲಿದ್ದಾರೆ ಎಂದು ಯೋಗಾ ಗುರು ಬಾಬಾ ರಾಮದೇವ್ ಆರೋಪಿಸಿದ್ದಾರೆ. ಮೋದಿ ಕಟ್ಟಾ ಬೆಂಬಲಿಗ ಎಂದು ಹೇಳಿಕೆ ನೀಡುತ್ತಿದ್ದ ಬಾಬಾ ರಾಮದೇವ್ ಇದೀಗ ಉಲ್ಟಾ ಹೊಡೆದಿದ್ದಾರೆ.

ಬಿಜೆಪಿ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ನೇರ ನಡೆಯ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ಬಣ್ಣಿಸಿದ ರಾಮದೇವ್, ಮೋದಿ ಪ್ರಧಾನಿಯಾಗುವ ಬಗ್ಗೆ ತುಂಬಾ ಅವಸರದಲ್ಲಿದ್ದಾರೆ. ಅವರಿಗೆ ತಾಳ್ಮೆ ಅಗತ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.

ಪಾಟಲಿಪುತ್ರದಿಂದ ತಮ್ಮ ಬೆಂಬಲಿಗ ನಿಶಿಕಾಂತ್ ಯಾದವ್ ಅವರಿಗೆ ಲೋಕಸಭೆ ಟಿಕೆಟ್ ನೀಡದಿರುವುದು ಅಸಮಾಧಾನ ಮೂಡಿಸಿದೆ. ಕಳಂಕಿತರಾದ ಬಿ.ಎಸ್.ಯಡಿಯೂರಪ್ಪ ಮತ್ತು ಶ್ರೀರಾಮುಲುನಂತಹ ವ್ಯಕ್ತಿಗಳಿಗೆ ಟಿಕೆಟ್ ನೀಡಿರುವ ಬಿಜೆಪಿ ಹೈಕಮಾಂಡ್ ಕ್ರಮ ನಿರಾಸೆ ತಂದಿದೆ ಎಂದು ಕಿಡಿಕಾರಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಜ್ರಿವಾಲ್ ಠೇವಣಿಯನ್ನು ಕಳೆದುಕೊಂಡಲ್ಲಿ ರಾಜಕೀಯದಿಂದ ಸನ್ಯಾಸ ಸ್ವೀಕರಿಸುತ್ತೇನೆ ಎಂದು ಪ್ರಮಾಣ ಮಾಡಬೇಕು. ಮೋದಿ ವಿರುದ್ಧ ಸ್ಪರ್ಧಿಸಿ ಕಾಂಗ್ರೆಸ್‌ಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments