Webdunia - Bharat's app for daily news and videos

Install App

ಬಿಜೆಪಿಯನ್ನು ಹಣಿಯಲು ಕಾಂಗ್ರೆಸ್ಸೇತರ ಮೈತ್ರಿಯೇ ಪರ್ಯಾಯ: ಬಿಜೆಪಿ

Webdunia
ಮಂಗಳವಾರ, 1 ಏಪ್ರಿಲ್ 2014 (15:59 IST)
PTI
ಲೋಕಸಭೆಯ ಚುನಾವಣೆಯ ನಂತರ ಎಡಪಕ್ಷಗಳು ಜಾತ್ಯಾತೀತ ಬದ್ಧತೆಯನ್ನು ಸಾಬೀತುಪಡಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎನ್ನುವ ಕಾಂಗ್ರೆಸ್ ಮುಖಂಡ ಎ.ಕೆ.ಆಂಟನಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಎಡಪಕ್ಷದ ನಾಯಕ ಕಾರಟ್, ಬಿಜೆಪಿಯನ್ನು ಹಣಿಯಲು ಪರ್ಯಾಯವಾಗಿ ಕಾಂಗ್ರೆಸ್ಸೇತರ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಲಿದೆ. ಬಿಜೆಪಿಯನ್ನು ಹಣಿಯುವಲ್ಲಿ ಕೂಡಾ ಕಾಂಗ್ರೆಸ್ ವಿಫಲವಾಗಿದೆ. ಕಾಂಗ್ರೆಸ್ಸೇತರ ಮೈತ್ರಿಕೂಟ ಮಾತ್ರ ಬಿಜೆಪಿಗೆ ಪರಿಹಾರ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ತಿಳಿಸಿದ್ದಾರೆ.

ಲೋಕಸಭೆಯ ಚುನಾವಣೆಯ ನಂತರ ಎಡಪಕ್ಷಗಳು ಜಾತ್ಯಾತೀತ ಬದ್ಧತೆಯನ್ನು ಸಾಬೀತುಪಡಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಒಂದು ವೇಳೆ ಬೆಂಬಲ ನೀಡಲು ಸಿದ್ದವಾದಲ್ಲಿ ಸ್ವೀಕರಿಸಲು ನಾವು ಸಿದ್ದರಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ರಕ್ಷಣಾ ಸಚಿವ ಎ.ಕೆ.ಆಂಟನಿ ಹೇಳಿಕೆ ನೀಡಿದ್ದರು.

ಆಂಟನಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮತ್ತೊಬ್ಬ ಸಿಪಿಐ(ಎಂ) ನಾಯಕ ಪಿನಾರಯಿ ವಿಜಯನ್, ಪ್ರಮುಖ ಪ್ರಶ್ನೆಯೆಂದರೆ, ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಸರಕಾರ ರಚಿಸಲು ಎರಡಂಕಿಯ ಗಡಿದಾಡುವ ಬಗ್ಗೆ ಸಂಶಯವಿದೆ ಎಂದು ಲೇವಡಿ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments