Webdunia - Bharat's app for daily news and videos

Install App

ಮೋದಿಯನ್ನು ಪ್ರಧಾನಿಯಾಗಲು ಯಾವತ್ತೂ ಬಿಡುವುದಿಲ್ಲ: ಗುಡುಗಿದ ಮುಲಾಯಂ

Webdunia
ಮಂಗಳವಾರ, 1 ಏಪ್ರಿಲ್ 2014 (15:40 IST)
PTI
ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ಪ್ರಧಾನಿಯಾಗಲು ಯಾವತ್ತೂ ಬಿಡುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಗುಡುಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಮೋದಿಗೆ ಪ್ರಧಾನಿ ಪಟ್ಟ ನೀಡಬೇಕು ಎನ್ನುವ ಬಿಜೆಪಿ ಬಯಕೆಯನ್ನು ಈಡೇರಿಸಲು ಬಿಡುವುದಿಲ್ಲ. ಒಂದು ವೇಳೆ ಉತ್ತರಪ್ರದೇಶದಲ್ಲಿ ಹೆಚ್ಚಿನ ಕ್ಷೇತ್ರದಲ್ಲಿ ಜಯಗಳಿಸುವಲ್ಲಿ ವಿಫಲವಾದಲ್ಲಿ ಮೋದಿ ಯಾವತ್ತೂ ಪ್ರಧಾನಿಯಾಗುವುದಿಲ್ಲ ಎಂದರು.

ಮುಸ್ಲಿಂ ಸಮುದಾಯಕ್ಕೆ ಸೌಲಭ್ಯಗಳನ್ನು ಒದಗಿಸಿಕೊಡುವ ಕುರಿತಂತೆ ಬಿಜೆಪಿ ಮತ್ತು ಬಿಎಸ್‌ಪಿ ಪಕ್ಷಗಳು ಒಂದು ನಾಣ್ಯದ ಎರಡು ಮುಖಗಳು. ಕಾಂಗ್ರೆಸ್‌ನ ಪಾತ್ರ ಕೂಡಾ ಸಂಶಯಾತ್ಮಕವಾಗಿದೆ ಎಂದು ತಿಳಿಸಿದ್ದಾರೆ.

ರಿಯಾಜ್ ಅಹ್ಮದ್ ನೇತೃತ್ವದ ಸುನ್ನಿ ಉಲೇಮಾ ಕೌನ್ಸಿಲ್‌ನ ಪ್ರತಿನಿದಿಗಳು ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದೆ.

ದೇಶದ ಸಂವಿಧಾನ ಉಳಿಸಲು ಮತ್ತು ಜಾತ್ಯಾತೀತ ಬದ್ದತೆಯನ್ನು ಸಂರಕ್ಷಿಸಲು ಬಾಬರಿ ಮಸೀದಿಯನ್ನು ಬಿಜೆಪಿಯಿಂದ ಉಳಿಸಿದ್ದೇನೆ. ಮುಸ್ಲಿಂ ಸಮುದಾಯಕ್ಕೆ ಧಕ್ಕೆಯಾದಾಗ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಿದ್ದೇನೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments