ರಾಮಲೀಲಾ ಮೈದಾನದಲ್ಲಿ ನಡೆಸಲಾದ ಯೋಗಾ ಮಹೋತ್ಸವ ಕಾರ್ಯಕ್ರಮ ರಾಜಕೀಯ ಪ್ರೇರಿತವಾಗಿದ್ದು, ಯೋಗಾ ಗುರು ಬಾಬಾ ರಾಮದೇವ್ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ.
ಬಾಬಾ ರಾಮದೇವ್ ಆಯೋಜಿಸಿದ ಯೋಗಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಾಷಣ ಮಾಡಿರುವುದನ್ನು ಚುನಾವಣೆ ಆಯೋಗ ಪ್ರಶ್ನಿಸಿದೆ.
ಬಾಬಾ ರಾಮದೇವ್ ಸೇರಿದಂತೆ ಯೋಗಾ ಮಹೋತ್ಸವ ಆಯೋಜಕರ ವಿರುದ್ಧ ಕೂಡಾ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ಚುನಾವಣಾ ಆಯುಕ್ತ ವಿಜಯ್ ದೇವ್ ತಿಳಿಸಿದ್ದಾರೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲವಾದ್ದರಿಂದ ಅವರಿಗೆ ನೋಟಿಸ್ ಜಾರಿ ಮಾಡಲಾಗಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ,.