Webdunia - Bharat's app for daily news and videos

Install App

ಶಿವಮೊಗ್ಗ ಜನರ ಮೇಲೆ ತಮಗೆ ವಿಶ್ವಾಸವಿದೆ, ಖಂಡಿತ ಗೆದ್ದೇಗೆಲ್ತೀನಿ: ಗೀತಾ ಶಿವರಾಜ್ ಕುಮಾರ್

Webdunia
ಮಂಗಳವಾರ, 18 ಮಾರ್ಚ್ 2014 (18:11 IST)
PR
PR
ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ಕರೆದು ಪತ್ರಕರ್ತರ ಜತೆ ಸಂವಾದ ನಡೆಸಿದರು.. ನಿನ್ನೆಯಷ್ಟೇ ಜೆಡಿಎಸ್‌ಗೆ ಅಧಿಕೃತವಾಗಿ ಗೀತಾ ಸೇರ್ಪಡೆಯಾಗಿದ್ದು, ಶಿವಮೊಗ್ಗದ ರಾಜಕೀಯ ವಲಯದಲ್ಲಿ ರಾಜ್ ಕುಟುಂಬ ಬಂಗಾರಪ್ಪ ಕುಟುಂಬಕ್ಕೆ ಸಾಥ್ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೀತಾ ತಾವು ಚುನಾವಣೆಯಲ್ಲಿ ಗೆದ್ದರೆ, ಗ್ರಾಮೀಣ ಭಾಗದ ಅಭಿವೃದ್ಧಿಗೆ ಒತ್ತುನೀಡುವುದಾಗಿ ಹೇಳಿದರು. ತಮಗೆ ತಮ್ಮನ ಚುನಾವಣೆಯಲ್ಲಿ ಕೂಡ ಪ್ರಚಾರ ಮಾಡಿದ ಅನುಭವವಿದೆ.

ತಂದೆ ಮಾಡಿದ ಕೆಲಸಗಳೇ ತಮಗೆ ಆಶೀರ್ವಾದವಾಗಲಿದೆ ಎಂದು ಗೀತಾ ಹೇಳಿದರು. ಸಂವಾದದಲ್ಲಿ ಗೀತಾ ಜತೆ ಶಿವಣ್ಣ ಉಪಸ್ಥಿತರಿದ್ದರು. ದೇವೇಗೌಡರ ಬಗ್ಗೆ ತಮಗೆ ತುಂಬಾ ಗೌರವವಿದೆ ಎಂದು ಗೀತಾ ಹೇಳಿದರು. ತಾವು ಚುನಾವಣೆಯಲ್ಲಿ ಗೆದ್ದರೆ ತಂದೆ ಮಾಡಿದ ಕೆಲಸಗಳನ್ನು ಮುಂದುವರಿಸುವೆ ಎಂದು ಹೇಳಿದರು. ತಂದೆಯ ಕನಸುಗಳನ್ನು ನಾನು ನೆರವೇರಿಸಿ ಶಿವಮೊಗ್ಗದ ಅಭಿವೃದ್ಧಿಗೆ ದುಡಿಯುತ್ತೇನೆ ಎಂದು ಗೀತಾ ಹೇಳಿದರು. ಶಿವಮೊಗ್ಗ ಜನರ ಮೇಲೆ ತಮಗೆ ವಿಶ್ವಾಸವಿದೆ. ಖಂಡಿತ ಗೆದ್ದೇಗೆಲ್ತೀನಿ ಎಂದು ಗೀತಾ ವಿಶ್ವಾಸ ವ್ಯಕ್ತಪಡಿಸಿದರು. ಈ ಮಧ್ಯೆ ಮಾತನಾಡಿದ ಶಿವರಾಜ್ ಕುಮಾರ್ ಮಹಿಳೆಯರು ರಾಜಕೀಯಕ್ಕೆ ಬರಬೇಕು,

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಟಿಕೆಟ್ ಸಿಗುವ ವಿಚಾರವಾಗಿ ಕುಮಾರ್ ಬಂಗಾರಪ್ಪ ಬೆಂಬಲಿಗರು ಪ್ರತಿಭಟನೆ ಕೈಗೊಂಡಿದ್ದರು. ತಮಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಅಂತಿಮ ಹಂತದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಕ್ಕೂ ಸಿದ್ದ ಎಂದು ಕುಮಾರ್ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments