Select Your Language

Notifications

webdunia
webdunia
webdunia
webdunia

ಶಿವಮೊಗ್ಗ : ಬಿ.ಫಾರಂ ರಹಿತ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಶಿವಮೊಗ್ಗ : ಬಿ.ಫಾರಂ ರಹಿತ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಶಿವಮೊಗ್ಗ , ಬುಧವಾರ, 19 ಮಾರ್ಚ್ 2014 (15:46 IST)
PTI
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರು ಇಂದು ಬಿ.ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಗೊಂದಲ ಇನ್ನು ಮುಗಿದಿಲ್ಲ ಎಂಬುದು ಸ್ಪಷ್ಟವಾಗಿದೆ.

ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಂಡಾರಿ, ಮಾರ್ಚ್ 26ರ ವರೆಗೆ ಬಿ.ಫಾರಂ ಸಲ್ಲಿಕೆಗೆ ಅವಕಾಶವಿರುವ ಹಿನ್ನೆಲೆಯಲ್ಲಿ ತಾವು ಬಿ ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ, ಮಂಜುನಾಥ್ ಭಂಡಾರಿ ಅವರು ಬಿ.ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು, ಶಿವಮೊಗ್ಗ ಕ್ಷೇತ್ರದಲ್ಲಿ ಟಿಕೆಟ್ ಬಗ್ಗೆ ಯಾವುದೇ ಗೊಂದಲ ಇಲ್ಲ. ಮಂಜುನಾಥ್ ಬಂಡಾರಿ ಕಾಂಗ್ರೆಸ್‌ನ ಒಮ್ಮತದ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಟಿಕೆಟ್ ತಮಗೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರ ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್‌ನ ಮುಖಂಡರ ಮೇಲೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಬಿ.ಫಾರಂನ್ನು ನೀಡುವುದನ್ನು ತಡೆಹಿಡಿಯಲಾಗಿದೆ ಎನ್ನಲಾಗಿದೆ.

ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ, ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರು ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Share this Story:

Follow Webdunia kannada