Webdunia - Bharat's app for daily news and videos

Install App

ಸಿದ್ದರಾಮಯ್ಯ ಗೋಕರ್ಣದ ಜ್ಯೋತಿರ್ಲಿಂಗದಂತೆ ಯಾರಿಂದಲೂ ಅಲ್ಲಾಡಿಸಲು ಆಗಲ್ಲ: ಇಬ್ರಾಹಿಂ

Webdunia
ಸೋಮವಾರ, 7 ಏಪ್ರಿಲ್ 2014 (15:18 IST)
PR
ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕರ್ಣದ ಜ್ಯೋತಿರ್ಲಿಂಗದಂತೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅಲ್ಲಾಡಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಗುಡುಗಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನುವ ವರದಿಗಳು ಸತ್ಯಕ್ಕೆ ದೂರವಾಗಿವೆ. ಮುಂದಿನ ಐದು ವರ್ಷಗಳವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಸಿ.ಎಂ. ಇಬ್ರಾಹಿಂ, ಬಿಜೆಪಿ ಪಕ್ಷ ಭ್ರಷ್ಟಾಚಾರಿಗಳ ಪಕ್ಷ ಎಂದು ಮೂದಲಿಸಿದರು.

ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ನಂಗಾನಾಚ್ ನಡೆಯುತ್ತಿತ್ತು. ಬಿಜೆಪಿ ಮುಖ್ಯಮಂತ್ರಿಯೇ ಜೈಲಿಗೆ ಹೋಗಿದ್ದರು. ಮಂತ್ರಿಗಳು ಕೂಡಾ ತಾವೇನು ಕಮ್ಮಿ ಎನ್ನುವಂತೆ ಮಂತ್ರಿಗಳು ಕೂಡಾ ಸರದಿಯಲ್ಲಿ ಜೈಲಿನ ಸುಖ ಕಂಡು ಬಂದಿದ್ದರು ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷ ದಲಿತರ, ಶೋಷಿತರ ಬಡವರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಬಿಜೆಪಿ ಪಕ್ಷ ಕೇವಲ ಕೋಮುವಾದ, ಉದ್ಯಮಿಗಳ ಓಲೈಕೆಯ ಪಕ್ಷವಾಗಿದೆ ಎಂದು ಸಿ.ಎಂ.ಇಬ್ರಾಹಿಂ ಟೀಕಿಸಿದ್ದಾ ರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments